ಸಾಂದರ್ಭಿಕ ಚಿತ್ರ 
ರಾಜ್ಯ

ಸಾಲದ ಸುಳಿಗೆ ಸಿಲುಕಿ ರಾಜ್ಯದ ನಾಲ್ವರು ರೈತರು ಆತ್ಮಹತ್ಯೆ

ರವಿ ಕೆ.ಡಿ (50) ಎಂಬ ರೈತ ಕಿರುಬಂಡವಾಳ ಸಂಸ್ಥೆಗಳು ಮತ್ತು ಬ್ಯಾಂಕ್‌ನಲ್ಲಿ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ/ ಹಾಸನ/ ದಾವಣಗೆರೆ: ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕೈಗೊಂಡು ಸಾಲಗಾರರ ರಕ್ಷಣೆಗೆ ಕಾನೂನು ತರುತ್ತಿರುವಾಗಲೇ, ಮೈಕ್ರೋಫೈನಾನ್ಸ್ ಕಂಪನಿಗಳು ಮತ್ತು ಬ್ಯಾಂಕ್‌ಗಳಲ್ಲಿ ಸಾಲ ಪಡೆದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಚಿಕ್ಕಬಳ್ಳಾಪುರ, ಹಾಸನ ಮತ್ತು ದಾವಣಗೆರೆಯಲ್ಲಿ ಈ ಪ್ರಕರಣಗಳು ವರದಿಯಾಗಿವೆ.

ಸೋಮವಾರ ವರದಿಯಾದ ಹಾಸನದ ಪ್ರಕರಣವು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಆರೋಪಕ್ಕೆ ಕಾರಣವಾಗಿದೆ. ರವಿ ಕೆ.ಡಿ (50) ಎಂಬ ರೈತ ಕಿರುಬಂಡವಾಳ ಸಂಸ್ಥೆಗಳು ಮತ್ತು ಬ್ಯಾಂಕ್‌ನಲ್ಲಿ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರಕಲಗೂಡು ತಾಲೂಕಿನ ಕಂತೆನಹಳ್ಳಿ ನಿವಾಸಿ ರವಿ ಮೂರು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಶುಂಠಿ ಕೃಷಿ ಮಾಡಲು 9 ಲಕ್ಷ ಸಾಲ ಮಾಡಿದ್ದರು. ಬೆಳೆಗೆ ರೋಗ ರುಜಿನಗಳು ಕಾಣಿಸಿಕೊಂಡು ಎರಡು ತಿಂಗಳ ಹಿಂದೆ ಕ್ವಿಂಟಲ್‌ಗೆ 3000 ರೂ.ನಿಂದ 900 ರೂ.ಗೆ ಕುಸಿದಿದ್ದರಿಂದ ತೀವ್ರ ನಷ್ಟ ಅನುಭವಿಸಿದರು.

ವಿವಿಧ ಮೈಕ್ರೋಫೈನಾನ್ಸ್ ಕಂಪನಿಗಳು ಮತ್ತು ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಬಂಡವಾಳ ಸಂಸ್ಥೆಗಳ ಕಿರುಕುಳದಿಂದ ಅವರು ವಿಚಲಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಫೈನಾನ್ಷಿಯರ್‌ಗಳಿಂದ ಸಾಲ ಪಡೆದಿದ್ದ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರೀಶ್ ಎಂಬವರು ಸಾಲ ಮಾಡಿ ಟ್ರ್ಯಾಕ್ಟರ್ ಖರೀದಿಸಿದ್ದರು ಎಂದು ಗುಡಿಬಂಡೆ ಪೊಲೀಸರು ದೂರು ದಾಖಲಿಸಿದ್ದಾರೆ. ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಗಿರೀಶ್ ಖಾಸಗಿ ಫೈನಾನ್ಸ್ ಕಂಪನಿಗಳಿಂದ ಪಡೆದ ಸಾಲವನ್ನು ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬೀಜಿಗನಹಳ್ಳಿ ನಿವಾಸಿ ಗಿರೀಶ್ ಪತ್ನಿ ಪ್ರವಳಿಕಾ ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಗೌರಿಬಿದನೂರಿನ ನರಸಿಂಹಯ್ಯ ಅವರು ಖಾಸಗಿ ಫೈನಾನ್ಷಿಯರ್‌ಗಳಿಂದ ಪಡೆದ ಸಾಲವನ್ನು ತೀರಿಸಲಾಗದೆ ತಮ್ಮ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಖಾಸಗಿ ಫೈನಾನ್ಷಿಯರ್‌ಗಳಿಂದ ಸಾಲ ಪಡೆದಿದ್ದು, ಅದನ್ನು ಮರುಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಪತ್ನಿ ಪ್ರಭಾವತಿ ದೂರಿನಲ್ಲಿ ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಎರಡೂ ದೂರುಗಳಲ್ಲಿ ಖಾಸಗಿ ಫೈನಾನ್ಷಿಯರ್‌ಗಳಿಂದ ಕಿರುಕುಳದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಆದಾಗ್ಯೂ, ವಿವರವಾದ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ದಾವಣಗೆರೆಯಲ್ಲಿ ಹರಿಹರ ತಾಲೂಕಿನ ದೀತೂರು ಗ್ರಾಮದ ರೈತರೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಲ್.ಕೆ.ಸುರೇಶ್ (42) ಮೃತ ವ್ಯಕ್ತಿ, ಸುರೇಶ್ ಎಂಬಾತ ಬ್ಯಾಂಕಿನಲ್ಲಿ 21 ಲಕ್ಷ ರೂಪಾಯಿ ಸಾಲ ಪಡೆದು ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಪತ್ನಿ ಎಲ್.ಎಸ್.ಕಲ್ಪನಾ ನೀಡಿದ ದೂರಿನ ಮೇರೆಗೆ ಹರಿಹರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT