ಮಂಕಾಳ್ ವೈದ್ಯ-ಡಾ.ಜಿ ಪರಮೇಶ್ವರ್  online desk
ರಾಜ್ಯ

"ಗೋಕಳ್ಳರ ಮೇಲೆ ಸ್ಥಳದಲ್ಲೇ ಶೂಟೌಟ್": ಮಂಕಾಳ್ ವೈದ್ಯ ಹೇಳಿಕೆಗೆ ವ್ಯಾಪಕ ವಿರೋಧ; ಗೃಹ ಸಚಿವರು ಹೇಳಿದ್ದೇನೆಂದರೆ...

ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಮಂಕಾಳು ವೈದ್ಯ ಅವರ ಹೇಳಿಕೆಯನ್ನು ಆರ್ ಎಸ್ಎಸ್ ಮನಸ್ಥಿಗೆ ಹೋಲಿಕೆ ಮಾಡಿದರೆ, ಮತ್ತೊಂದೆಡೆ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು ಸಚಿವರ ಹೇಳಿಕೆಯನ್ನು ಖಂಡಿಸಲೂ ಆಗದೇ, ಸಮರ್ಥಿಸಿಕೊಳ್ಳಲೂ ಆಗದೇ ಇರುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ.

ಬೆಂಗಳೂರು: ಗೋಕಳ್ಳತನ ಮಾಡುವವರ ಮೇಲೆ ಸ್ಥಳದಲ್ಲೇ ಶೂಟೌಟ್ ಮಾಡಲಾಗುವುದು ಎಂಬ ಕಾಂಗ್ರೆಸ್ ಸಚಿವ ಮಂಕಾಳ್ ವೈದ್ಯ ನೀಡಿದ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಮಂಕಾಳು ವೈದ್ಯ ಅವರ ಹೇಳಿಕೆಯನ್ನು ಆರ್ ಎಸ್ಎಸ್ ಮನಸ್ಥಿಗೆ ಹೋಲಿಕೆ ಮಾಡಿದರೆ, ಮತ್ತೊಂದೆಡೆ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು ಸಚಿವರ ಹೇಳಿಕೆಯನ್ನು ಖಂಡಿಸಲೂ ಆಗದೇ, ಸಮರ್ಥಿಸಿಕೊಳ್ಳಲೂ ಆಗದೇ ಇರುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ.

ತಮ್ಮ ಸಹೋದ್ಯೋಗಿ ಸಚಿವ ಮಂಕಾಳ್ ವೈದ್ಯ ಅವರ ಹೇಳಿಕೆಗಳ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರಿಸಿರುವ ಗೃಹ ಸಚಿವ ಡಾ.ಜಿ ಪರಮೆಶ್ವರ್, ಮಂಕಾಳು ವೈದ್ಯ ಅವರದ್ದು ವೈಯಕ್ತಿಕ ಹೇಳಿಕೆ. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಮಂಕಾಳು ವೈದ್ಯ ಅವರ ಹೇಳಿಕೆಗೆ ಹಲವರಿಂದ ವಿರೋಧ ವ್ಯಕ್ತವಾಗುತ್ತಿದ್ದು, ಮಂಕಾಳ್ ವೈದ್ಯ ಸಮಾಜವಾದಿ ಸಿದ್ದರಾಮಯ್ಯ ಅವರ ಸರ್ಕಾರದ ಸಚಿವರಾ? ಮಂಕಾಳು ವೈದ್ಯ ಅವರು ಸಿದ್ದರಾಮಯ್ಯ ಸರ್ಕಾರವನ್ನು ಬಿಜೆಪಿ ಸರ್ಕಾರ ಎಂದು ಭಾವಿಸಿದ್ದಾರಾ? ದನಕಳ್ಳತನ ಮಾಡಿದರೆ ಅವರಿಗೆ ಶಿಕ್ಷೆ ಕೊಡಿಸುವ ವ್ಯವಸ್ಥೆ ಇದೆ ಎಂಬುದನ್ನೂ ಮರೆತು ಮಾತನಾಡುತ್ತಿರುವ ಸಚಿವರ ಹೇಳಿಕೆ ಸರ್ವಾಧಿಕಾರಿತನವನ್ನು ತೋರುತ್ತಿದೆ. ಇಂತಹ ಮಂತ್ರಿಯನ್ನು ತಕ್ಷಣವೇ ಸಿದ್ದರಾಮಯ್ಯ ವಜಾಗೊಳಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT