ಡಿಕೆ ಶಿವಕುಮಾರ್ ನೇತೃತ್ವದ ಸಭೆ 
ರಾಜ್ಯ

Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಹೊಸ ಕೈಗಾರಿಕಾ ನೀತಿ ಬಿಡುಗಡೆ

2,000 ಹೂಡಿಕೆದಾರರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ ಮತ್ತು 60 ಕ್ಕೂ ಹೆಚ್ಚು ಉದ್ಯಮ ತಜ್ಞರು ಸಭೆಯಲ್ಲಿ ಮಾತನಾಡಲಿದ್ದಾರೆ. 18 ದೇಶಗಳಲ್ಲಿ, ಒಂಬತ್ತು ಪ್ರತ್ಯೇಕ ಪೆವಿಲಿಯನ್‌ಗಳನ್ನು ಹೊಂದಿರುತ್ತವೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ 'ಇನ್ವೆಸ್ಟ್ ಕರ್ನಾಟಕ 2025'ರಲ್ಲಿ 18 ದೇಶಗಳ ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಪೂರ್ವಭಾವಿ ಸಿದ್ಧತಾ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಫೆಬ್ರವರಿ 11 ರಂದು ಸಂಜೆ ಔಪಚಾರಿಕ ಉದ್ಘಾಟನೆ ನಂತರ ಫೆಬ್ರವರಿ 12 ರಿಂದ ಮೂರು ದಿನಗಳ ಕಾಲ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, 10 ಲಕ್ಷ ಕೋಟಿ ರೂ. ಹೂಡಿಕೆ ಪ್ರಸ್ತಾವನೆ ಆಕರ್ಷಿಸುವ ನಿರೀಕ್ಷೆಯಿದೆ ಎಂದರು.

2,000 ಹೂಡಿಕೆದಾರರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ ಮತ್ತು 60 ಕ್ಕೂ ಹೆಚ್ಚು ಉದ್ಯಮ ತಜ್ಞರು ಸಭೆಯಲ್ಲಿ ಮಾತನಾಡಲಿದ್ದಾರೆ. 18 ದೇಶಗಳಲ್ಲಿ, ಒಂಬತ್ತು ಪ್ರತ್ಯೇಕ ಪೆವಿಲಿಯನ್‌ಗಳನ್ನು ಹೊಂದಿರುತ್ತವೆ. ಹೂಡಿಕೆದಾರರಿಗೆ ವಿವಿಧ ಹೂಡಿಕೆ ಅವಕಾಶಗಳು ಮತ್ತು ಉದ್ಯಮ ಸ್ನೇಹಿ ನೀತಿಗಳನ್ನು ಸರ್ಕಾರ ವಿವರಿಸುತ್ತದೆ ಎಂದು ಹೇಳಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಹಲವು ತಿಂಗಳುಗಳಿಂದ ಈ ಸಮಾವೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಯುಎಸ್, ಯುರೋಪ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಇತರ ಹಲವು ದೇಶಗಳಿಗೆ ನಿಯೋಗ ಕಳುಹಿಸಿ,ರೋಡ್ ಶೋಗಳಲ್ಲಿ ಭಾಗವಹಿಸಿದ್ದು, ಹೂಡಿಕೆದಾರರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ ಎಂದು ತಿಳಿಸಿದರು.

ಎಂ.ಬಿ. ಪಾಟೀಲ್ ಮಾತನಾಡಿ, - ಟೆಕ್-ಚಾಲಿತ, ಹಸಿರು, ಅಂತರ್ಗತ ಮತ್ತು ಸ್ಥಿತಿಸ್ಥಾಪಕ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಈ ಸಮಾವೇಶದ ಥೀಮ್ ಸಿದ್ದಪಡಿಸಲಾಗಿದೆ. ದಾವೋಸ್‌ನಲ್ಲಿನ ವಿಶ್ವ ಆರ್ಥಿಕ ವೇದಿಕೆಯಿಂದ (WEF) ಸ್ಫೂರ್ತಿ ಪಡೆದು, ಹೊಸ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪ್ರಮುಖ ಅಂಶವಾಗಿ, ರಫ್ತು ಉತ್ತೇಜನಕ್ಕೆ ಬಲವಾದ ಒತ್ತು ನೀಡುವ ಹೊಸ ಕೈಗಾರಿಕಾ ನೀತಿಯನ್ನು (2025-30) ಈ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಡಾ.ಡಿ.ಎಂ.ನಂಜುಂಡಪ್ಪ ಸಮಿತಿಯ ವರದಿಯಂತೆ ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿನ ಕೈಗಾರಿಕೆಗಳಿಗೆ ಈ ನೀತಿಯು ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT