ಡಿಕೆ ಶಿವಕುಮಾರ್ ನೇತೃತ್ವದ ಸಭೆ 
ರಾಜ್ಯ

Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಹೊಸ ಕೈಗಾರಿಕಾ ನೀತಿ ಬಿಡುಗಡೆ

2,000 ಹೂಡಿಕೆದಾರರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ ಮತ್ತು 60 ಕ್ಕೂ ಹೆಚ್ಚು ಉದ್ಯಮ ತಜ್ಞರು ಸಭೆಯಲ್ಲಿ ಮಾತನಾಡಲಿದ್ದಾರೆ. 18 ದೇಶಗಳಲ್ಲಿ, ಒಂಬತ್ತು ಪ್ರತ್ಯೇಕ ಪೆವಿಲಿಯನ್‌ಗಳನ್ನು ಹೊಂದಿರುತ್ತವೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ 'ಇನ್ವೆಸ್ಟ್ ಕರ್ನಾಟಕ 2025'ರಲ್ಲಿ 18 ದೇಶಗಳ ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಪೂರ್ವಭಾವಿ ಸಿದ್ಧತಾ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಫೆಬ್ರವರಿ 11 ರಂದು ಸಂಜೆ ಔಪಚಾರಿಕ ಉದ್ಘಾಟನೆ ನಂತರ ಫೆಬ್ರವರಿ 12 ರಿಂದ ಮೂರು ದಿನಗಳ ಕಾಲ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, 10 ಲಕ್ಷ ಕೋಟಿ ರೂ. ಹೂಡಿಕೆ ಪ್ರಸ್ತಾವನೆ ಆಕರ್ಷಿಸುವ ನಿರೀಕ್ಷೆಯಿದೆ ಎಂದರು.

2,000 ಹೂಡಿಕೆದಾರರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ ಮತ್ತು 60 ಕ್ಕೂ ಹೆಚ್ಚು ಉದ್ಯಮ ತಜ್ಞರು ಸಭೆಯಲ್ಲಿ ಮಾತನಾಡಲಿದ್ದಾರೆ. 18 ದೇಶಗಳಲ್ಲಿ, ಒಂಬತ್ತು ಪ್ರತ್ಯೇಕ ಪೆವಿಲಿಯನ್‌ಗಳನ್ನು ಹೊಂದಿರುತ್ತವೆ. ಹೂಡಿಕೆದಾರರಿಗೆ ವಿವಿಧ ಹೂಡಿಕೆ ಅವಕಾಶಗಳು ಮತ್ತು ಉದ್ಯಮ ಸ್ನೇಹಿ ನೀತಿಗಳನ್ನು ಸರ್ಕಾರ ವಿವರಿಸುತ್ತದೆ ಎಂದು ಹೇಳಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಹಲವು ತಿಂಗಳುಗಳಿಂದ ಈ ಸಮಾವೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಯುಎಸ್, ಯುರೋಪ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಇತರ ಹಲವು ದೇಶಗಳಿಗೆ ನಿಯೋಗ ಕಳುಹಿಸಿ,ರೋಡ್ ಶೋಗಳಲ್ಲಿ ಭಾಗವಹಿಸಿದ್ದು, ಹೂಡಿಕೆದಾರರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ ಎಂದು ತಿಳಿಸಿದರು.

ಎಂ.ಬಿ. ಪಾಟೀಲ್ ಮಾತನಾಡಿ, - ಟೆಕ್-ಚಾಲಿತ, ಹಸಿರು, ಅಂತರ್ಗತ ಮತ್ತು ಸ್ಥಿತಿಸ್ಥಾಪಕ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಈ ಸಮಾವೇಶದ ಥೀಮ್ ಸಿದ್ದಪಡಿಸಲಾಗಿದೆ. ದಾವೋಸ್‌ನಲ್ಲಿನ ವಿಶ್ವ ಆರ್ಥಿಕ ವೇದಿಕೆಯಿಂದ (WEF) ಸ್ಫೂರ್ತಿ ಪಡೆದು, ಹೊಸ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪ್ರಮುಖ ಅಂಶವಾಗಿ, ರಫ್ತು ಉತ್ತೇಜನಕ್ಕೆ ಬಲವಾದ ಒತ್ತು ನೀಡುವ ಹೊಸ ಕೈಗಾರಿಕಾ ನೀತಿಯನ್ನು (2025-30) ಈ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಡಾ.ಡಿ.ಎಂ.ನಂಜುಂಡಪ್ಪ ಸಮಿತಿಯ ವರದಿಯಂತೆ ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿನ ಕೈಗಾರಿಕೆಗಳಿಗೆ ಈ ನೀತಿಯು ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ