ಬೈಕ್ ನ್ನು ವಶಕ್ಕೆ ಪಡೆದಿದ್ದ ಸಿಟಿ ಮಾರ್ಕೆಟ್ ಸಂಚಾರ ಪೊಲೀಸರು 
ರಾಜ್ಯ

ಬೆಂಗಳೂರು: 311 ಬಾರಿ ಸಂಚಾರ ನಿಯಮ ಉಲ್ಲಂಘನೆ; 1.61 ಲಕ್ಷ ರೂ ದಂಡ ಕಟ್ಟಿದ ಬೈಕ್ ಸವಾರ!

ಬೆಂಗಳೂರಿನ ನಿವಾಸಿ ಸುದೀಪ್ ಆ ಮಹಾನುಭವ. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡು ಆತನ ಮನೆಗೆ ನೋಟಿಸ್ ಕಳುಹಿಸಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಸಂಚಾರ ಪೊಲೀಸರು ಕೂಡಾ ಆತನನ್ನು ಹಿಡಿಯುವತ್ತ ಯಾವುದೇ ಗಮನ ಹರಿಸಿರಲಿಲ್ಲ.

ಬೆಂಗಳೂರು: ಗೇರ್ ಇಲ್ಲದ ಸ್ಕೋಟರ್ ನಲ್ಲಿ ಬೆಂಗಳೂರೆಲ್ಲಾ ಸುತ್ತಾಡುತ್ತಾ 311 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಬೈಕ್ ಸವಾರನೊಬ್ಬ ಕೊನೆಗೆ ರೂ. 1.61 ಲಕ್ಷ ದಂಡ ಪಾವತಿಸಿ, ಸೀಜ್ ಆಗಿದ್ದ ತನ್ನ ಬೈಕ್ ನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾನೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಬೆಂಗಳೂರಿನ ನಿವಾಸಿ ಸುದೀಪ್ ಆ ಮಹಾನುಭವ. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡು ಆತನ ಮನೆಗೆ ನೋಟಿಸ್ ಕಳುಹಿಸಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಸಂಚಾರ ಪೊಲೀಸರು ಕೂಡಾ ಆತನನ್ನು ಹಿಡಿಯುವತ್ತ ಯಾವುದೇ ಗಮನ ಹರಿಸಿರಲಿಲ್ಲ.

ಆದರೆ ಶಿಬಮ್ ಎಂಬ ವ್ಯಕ್ತಿ ಸಾಮಾಜಿಕ ಮಾಧ್ಯಮ x ನಲ್ಲಿ ಸುದೀಪ್ ಅವರ ಸಂಚಾರ ನಿಯಮ ಉಲ್ಲಂಘನೆ ವಿವರಗಳು, ವಿಧಿಸಲಾದ ದಂಡದ ಮೊತ್ತವನ್ನು ರಶೀದಿಯೊಂದಿಗೆ ಫೋಸ್ಟ್ ಮಾಡಿದ್ದರು.

ಬಳಿಕ ಬೆಂಗಳೂರು ನಗರ ಸಂಚಾರ ಪೊಲೀಸರು ಇನ್ನೂ ವಾಹನವನ್ನು ಏಕೆ ವಶಪಡಿಸಿಕೊಂಡಿಲ್ಲ ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದರಂತೆ ಸಿಟಿ ಮಾರ್ಕೆಟ್ ಸಂಚಾರ ಪೊಲೀಸರು ಸುದೀಪ್ ಅವರನ್ನು ಸುತ್ತುವರೆದು ಫೆಬ್ರವರಿ 3 ರಂದು ಬಂಧಿಸಿದ್ದರು.

ಫೆಬ್ರವರಿ 4 ರಂದು ಮಾಲೀಕ ರೂ. 1,61,500 ರೂ. ದಂಡವನ್ನು ಪಾವತಿಸಿದ ನಂತರ ಸೀಜ್ ಆಗಿದ್ದ ಬೈಕ್ ನ್ನು ಬಿಡುಗಡೆ ಮಾಡಲಾಗಿದ್ದು, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸವಾರನಿಗೆ ಸೂಚಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT