ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ, BWSSB ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರ ಕಿಡಿ

ಪ್ರೊಮೆನೇಡ್ ರಸ್ತೆ ಮತ್ತು ಅಸ್ಸಾಯೆ ರಸ್ತೆಯ ಕನಿಷ್ಠ 30 ನಿವಾಸಿಗಳು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ. ಎಲ್ಲರಲ್ಲೂ ಅತಿಸಾರ, ವಾಂತಿ ಮತ್ತು ನಿರ್ಜಲೀಕರಣ ಕಂಡು ಬಂದಿದೆ. ಬಳಿಕ ಅನುಮಾನಗೊಂಡಿರುವ ಸ್ಥಳೀಯರು ನೀರಿನ ಮಾದರಿಗಳನ್ನು ಬೆಂಗಳೂರು ಪೂರ್ವದ ಕಾಡುಗೊಂಡನಹಳ್ಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ನೀಡಿದ್ದಾರೆ.

ಬೆಂಗಳೂರು: ಬೆಂಗಳೂರು ಪೂರ್ವದ ಪುಲಿಕೇಶಿ ನಗರ ವಾರ್ಡ್‌ನ ಪ್ರೊಮೆನೇಡ್ ರಸ್ತೆಯ ಸುಮಾರು 30ಕ್ಕೂ ಹೆಚ್ಚು ನಿವಾಸಿಗಳು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವುದಾಗಿ ಬುಧವಾರ ತಿಳಿದುಬಂದಿದೆ.

ಕಲುಶಿತ ನೀರು ಸೇವಿಸಿ ಕಳೆದೆರಡು ವಾರಗಳಿಂದ 30 ಮಂದಿ ಅಸ್ವಸ್ಥರಾಗಿದ್ದಾರೆ. ಈ ಸಂಬಂಧ ಸ್ಥಳೀಯರು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ (BWSSB) ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದ್ದು, ಇದೀಗ ಸ್ಥಳೀಯರು ಬಿಬಿಎಂಪಿ ಮುಖ್ಯ ಆಯುಕ್ತರ ಗಮನಕ್ಕೆ ತಂದಿದ್ದಾರೆ.

ಈ ವಿಚಾರ ತಿಳಿದ ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಬ್ಲ್ಯೂಎಸ್ಎಸ್'ಬಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆಂದು ತಿಳಿದುಬಂದಿದೆ.

ಪ್ರೊಮೆನೇಡ್ ರಸ್ತೆ ಮತ್ತು ಅಸ್ಸಾಯೆ ರಸ್ತೆಯ ಕನಿಷ್ಠ 30 ನಿವಾಸಿಗಳು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ. ಎಲ್ಲರಲ್ಲೂ ಅತಿಸಾರ, ವಾಂತಿ ಮತ್ತು ನಿರ್ಜಲೀಕರಣ ಕಂಡು ಬಂದಿದೆ. ಬಳಿಕ ಅನುಮಾನಗೊಂಡಿರುವ ಸ್ಥಳೀಯರು ನೀರಿನ ಮಾದರಿಗಳನ್ನು ಬೆಂಗಳೂರು ಪೂರ್ವದ ಕಾಡುಗೊಂಡನಹಳ್ಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ನೀಡಿದ್ದಾರೆ.

ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇ. ಕೋಲಿ ಮತ್ತು ಕ್ಲೆಬ್ಸಿಲ್ಲಾ ನ್ಯುಮೋನಿಯಾದಂತಹ ಅಪಾಯಕಾರಿ ಬ್ಯಾಕ್ಟೀರಿಯಾಗಳು ಕಂಡುಬಂದಿವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಬಳಿಕ ನಿವಾಸಿಗಳು ಸ್ಥಳೀಯ ಬಿಡಬ್ಲ್ಯೂಎಸ್ಎಸ್ಬಿ ಎಇಇ ಅವರನ್ನು ಸಂಪರ್ಕಿಸಿದ್ದಾರೆ. ಆದರೆ ಅಧಿಕಾರಿ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಅಧಿಕಾರಿ ಮೊದಲು ನೀರು ಸರಬರಾಜನ್ನು ನಿಲ್ಲಿಸಿ, ಒಳಚರಂಡಿ ಸೋರಿಕೆಯನ್ನು ಪರಿಶೀಲಿಸಬೇಕಾಗಿತ್ತು. ಆದರೆ, ನಿರ್ಲಕ್ಷ್ಯ ತೋರಿದರು.

ಬಿಡಬ್ಲ್ಯೂಎಸ್ಎಸ್ಬಿ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡುವುದರೆ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಕಾಲರಾ, ಗ್ಯಾಸ್ಟ್ರೋಎಂಟರೈಟಿಸ್ ಮತ್ತು ಇತರ ಕಾಯಿಲೆಗಳು ಹರಡುತ್ತವೆ ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT