ಸಂಗ್ರಹ ಚಿತ್ರ 
ರಾಜ್ಯ

ಅನೈತಿಕ ಸಂಬಂಧ: ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ, ಪೊಲೀಸರಿಗೆ ಶರಣು

ರಬಿಯಾ (32) ಮೃತ ಮಹಿಳೆ. ನಿಜಾಮುದ್ದೀನ್ ಬಂಧಿತ ಆರೋಪಿ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಹಿಂದೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ವಾಸಿಸುತ್ತಿದ್ದರು.

ಬೆಂಗಳೂರು: ಪತ್ನಿಯ ಕತ್ತು ಹಿಸುಕಿ ಹತ್ಯೆಗೈದ ಪತಿಯೊಬ್ಬ, ತಾನೇ ಸೂಲಿಬೆಲೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದ ಶರಣಾಗಿದ್ದಾನೆ.

ರಬಿಯಾ (32) ಮೃತ ಮಹಿಳೆ. ನಿಜಾಮುದ್ದೀನ್ (35) ಬಂಧಿತ ಆರೋಪಿ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಹಿಂದೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ವಾಸಿಸುತ್ತಿದ್ದರು. ವೃತ್ತಿಯಲ್ಲಿ ಸರಕು ವಾಹನ ಚಾಲಕನಾಗಿರುವ ನಿಜಾಮುದ್ದೀನ್, ಪತ್ನಿಯ ಅಕ್ರಮ ಸಂಬಂಧಗಳ ಬಗ್ಗೆ ತಿಳಿದ ನಂತರ, ಹೊಸಕೋಟೆಗೆ ಸ್ಥಳಾಂತರಗೊಂಡು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ರಬಿಯಾ ವಿಜಯಪುರಕ್ಕೆ ಮರಳಲು ನಿಜಾಮುದ್ದೀನ್ ಜೊತೆ ಪದೇ ಪದೇ ಜಗಳವಾಡುತ್ತಿದ್ದು, ಇದಕ್ಕೆ ನಿಜಾಮುದ್ದೀನ್ ನಿರಾಕರಿಸಿದ್ದ. ಈ ನಡುವೆ ಪತಿ ಮನೆಯಲ್ಲಿ ಇಲ್ಲದ ವೇಳೆ ಪರಪುರುಷರೊಂದಿಗೆ ರಬಿಯಾ ಕಾಲ ಕಳೆಯುತ್ತಿದ್ದು, ಇದನ್ನು ತಿಳಿದು, ಆಕೆಯನ್ನು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.

ರಬಿಯಾ ಮೂವರು ಮಕ್ಕಳ ತಾಯಿಯಾಗಿದ್ದು, ಮಕ್ಕಳೆಲ್ಲರು ಮನೆಯಲ್ಲಿಯೇ ಇದ್ದ ಕಾರಣ , ಊಟದ ನಂತರ ವಾಕಿಂಗ್ ಗೆಂದು ಮನೆಯ ಸಮೀಪದ ಕೆರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ.

ಆ ವೇಳೆ ಪತ್ನಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಆಕೆಯ ಕತ್ತು ಹಿಸುಕಿ ಹತ್ಯೆ ಗೈದಿದ್ದಾನೆ. ಬಳಿಕ ತಾನೇ ಠಾಣೆಗೆ ಪೊಲೀಸರ ಮುಂದೆ ಶರಣಾಗಿದ್ದಾನೆ. ಇದೀಗ ಮಹಿಳೆಯ ಶವವನ್ನು ಪತ್ತೆ ಮಾಡಿರುವ ಪೊಲೀಸರು, ಹೊಸಕೋಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ