ಸಂಗ್ರಹ ಚಿತ್ರ 
ರಾಜ್ಯ

ಅನೈತಿಕ ಸಂಬಂಧ: ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ, ಪೊಲೀಸರಿಗೆ ಶರಣು

ರಬಿಯಾ (32) ಮೃತ ಮಹಿಳೆ. ನಿಜಾಮುದ್ದೀನ್ ಬಂಧಿತ ಆರೋಪಿ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಹಿಂದೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ವಾಸಿಸುತ್ತಿದ್ದರು.

ಬೆಂಗಳೂರು: ಪತ್ನಿಯ ಕತ್ತು ಹಿಸುಕಿ ಹತ್ಯೆಗೈದ ಪತಿಯೊಬ್ಬ, ತಾನೇ ಸೂಲಿಬೆಲೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದ ಶರಣಾಗಿದ್ದಾನೆ.

ರಬಿಯಾ (32) ಮೃತ ಮಹಿಳೆ. ನಿಜಾಮುದ್ದೀನ್ (35) ಬಂಧಿತ ಆರೋಪಿ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಹಿಂದೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ವಾಸಿಸುತ್ತಿದ್ದರು. ವೃತ್ತಿಯಲ್ಲಿ ಸರಕು ವಾಹನ ಚಾಲಕನಾಗಿರುವ ನಿಜಾಮುದ್ದೀನ್, ಪತ್ನಿಯ ಅಕ್ರಮ ಸಂಬಂಧಗಳ ಬಗ್ಗೆ ತಿಳಿದ ನಂತರ, ಹೊಸಕೋಟೆಗೆ ಸ್ಥಳಾಂತರಗೊಂಡು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ರಬಿಯಾ ವಿಜಯಪುರಕ್ಕೆ ಮರಳಲು ನಿಜಾಮುದ್ದೀನ್ ಜೊತೆ ಪದೇ ಪದೇ ಜಗಳವಾಡುತ್ತಿದ್ದು, ಇದಕ್ಕೆ ನಿಜಾಮುದ್ದೀನ್ ನಿರಾಕರಿಸಿದ್ದ. ಈ ನಡುವೆ ಪತಿ ಮನೆಯಲ್ಲಿ ಇಲ್ಲದ ವೇಳೆ ಪರಪುರುಷರೊಂದಿಗೆ ರಬಿಯಾ ಕಾಲ ಕಳೆಯುತ್ತಿದ್ದು, ಇದನ್ನು ತಿಳಿದು, ಆಕೆಯನ್ನು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.

ರಬಿಯಾ ಮೂವರು ಮಕ್ಕಳ ತಾಯಿಯಾಗಿದ್ದು, ಮಕ್ಕಳೆಲ್ಲರು ಮನೆಯಲ್ಲಿಯೇ ಇದ್ದ ಕಾರಣ , ಊಟದ ನಂತರ ವಾಕಿಂಗ್ ಗೆಂದು ಮನೆಯ ಸಮೀಪದ ಕೆರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ.

ಆ ವೇಳೆ ಪತ್ನಿಯೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಆಕೆಯ ಕತ್ತು ಹಿಸುಕಿ ಹತ್ಯೆ ಗೈದಿದ್ದಾನೆ. ಬಳಿಕ ತಾನೇ ಠಾಣೆಗೆ ಪೊಲೀಸರ ಮುಂದೆ ಶರಣಾಗಿದ್ದಾನೆ. ಇದೀಗ ಮಹಿಳೆಯ ಶವವನ್ನು ಪತ್ತೆ ಮಾಡಿರುವ ಪೊಲೀಸರು, ಹೊಸಕೋಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT