ಡಾ. ಜಿ. ಪರಮೇಶ್ವರ್ 
ರಾಜ್ಯ

ಮೈಕ್ರೋ ಫೈನಾನ್ಸ್ ಕಿರುಕುಳ: ರಾಜ್ಯಪಾಲರು ಸೂಚಿಸಿದರೆ ಬದಲಾವಣೆ ಮಾಡ್ತೀವಿ- ಡಾ. ಜಿ.ಪರಮೇಶ್ವರ್

ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಅವರು ಕಾನೂನು ತಜ್ಞರ ಜೊತೆಗೆ ಸಮಾಲೋಚಿಸಿ ಇಂದು ಸುಗ್ರೀವಾಜ್ಞೆಗೆ ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ.

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆ ಸೂಚನೆ ಅದನ್ನು ಮಾಡಲು ನಾವು ಸಿದ್ಧರಿದ್ದೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಅವರು ಕಾನೂನು ತಜ್ಞರ ಜೊತೆಗೆ ಸಮಾಲೋಚಿಸಿ ಇಂದು ಸುಗ್ರೀವಾಜ್ಞೆಗೆ ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ.

ಅದರಲ್ಲಿ ಏನಾದರೂ ಬದಲಾವಣೆಗೆ ಇಲ್ಲಿಯವರೆಗೂ ಸೂಚಿಸಿಲ್ಲ. ಒಂದು ವೇಳೆ ಬದಲಾವಣೆಗೆ ಸೂಚಿಸಿದರೆ ಕೂಡಲೇ ಅದನ್ನು ಬದಲಾವಣೆ ಮಾಡಿ, ಅವರ ಅನುಮೋದನೆಗಾಗಿ ವಾಪಸ್ ಕಳುಹಿಸುತ್ತೇವೆ ಎಂದರು.

"ದಂಡದ ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ, ಆದ್ದರಿಂದ ಅಪರಾಧಿಗಳು ಕಾನೂನಿನ ಶಿಕ್ಷೆಗೆ ಒಳಗಾಗುತ್ತಾರೆ. ಅದಕ್ಕಾಗಿಯೇ ಕಾನೂನನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ನಿಜವಾದ ಪರಿಣಾಮ ಬೀರಲು ಜೈಲು ಶಿಕ್ಷೆ ಮತ್ತು ದಂಡದ ಮೊತ್ತ ಎರಡನ್ನೂ ಹೆಚ್ಚಿಸಲಾಗಿದೆ. ಆತ್ಮಹತ್ಯೆ ಮತ್ತು ಕಿರುಕುಳದ ಘಟನೆ ತಡೆಯುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳು ಹೊಸ ಕಾನೂನನ್ನು ಪ್ರಶ್ನಿಸಿ ಹೈಕೋರ್ಟ್ ಗೆ ತೆರಳಲು ಅವಕಾಶವಾಗದಂತೆ, ರಾಜ್ಯಸರ್ಕಾರಕ್ಕೆ ಹಿನ್ನಡೆವಾಗದಂತೆ ಸುಗ್ರೀವಾಜ್ಞೆ ಖಾತ್ರಿಪಡಿಸಲಾಗುತ್ತಿದೆ. ಹೀಗಾಗಿ ಅದರ ಜಾರಿಗೆ ವಿಳಂಬವಾಗುತ್ತಿದೆ. ಈ ವಿಷಯ ಕುರಿತು ವಿವರವಾಗಿ ಚರ್ಚಿಸಿದ್ದೇವೆ. ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕಾನೂನು ಇಲಾಖೆಗೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT