ವಿಜಯ್ ಮಲ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ

ರೂ. 6,200 ಕೋಟಿ ಮರು ಪಾವತಿಸಬೇಕಿತ್ತು. ಆದರೆ ರೂ. 14,000 ಕೋಟಿ ವಸೂಲಿ ಮಾಡಲಾಗಿದೆ. ಇದನ್ನು ಲೋಕಸಭೆಗೆ ಹಣಕಾಸು ಸಚಿವರು ತಿಳಿಸಿದ್ದಾರೆ ಎಂದು ಮಲ್ಯ ಪರ ವಕೀಲರು ಹೇಳಿದ್ದಾರೆ.

ಬೆಂಗಳೂರು: ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಆರ್ಥಿಕ ಅಪರಾಧಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಲ್ಯ ಪರವಾಗಿ ಹಿರಿಯ ವಕೀಲ ಸಾಜನ್ ಪೂವಯ್ಯ ವಾದ ಮಂಡಿಸಿದ್ದಾರೆ.

ರೂ. 6,200 ಕೋಟಿ ಮರು ಪಾವತಿಸಬೇಕಿತ್ತು. ಆದರೆ ರೂ. 14,000 ಕೋಟಿ ವಸೂಲಿ ಮಾಡಲಾಗಿದೆ. ಇದನ್ನು ಲೋಕಸಭೆಗೆ ಹಣಕಾಸು ಸಚಿವರು ತಿಳಿಸಿದ್ದಾರೆ ಎಂದು ಮಲ್ಯ ಪರ ವಕೀಲರು ಹೇಳಿದ್ದಾರೆ.

ರೂ. 10, 200 ಕೋಟಿ ವಸೂಲಿಯಾಗಿದೆ ಎಂದು ಸಾಲ ವಸೂಲಾತಿ ಅಧಿಕಾರಿ ಹೇಳಿಕೆ ನೀಡಿದ್ದಾರೆ ಎಂದು ಮಲ್ಯ ಪರ ವಕೀಲರು ವಾದಿಸಿದ್ದಾರೆ. ಸಂಪೂರ್ಣ ಸಾಲದ ಮೊತ್ತವನ್ನು ತೆರವುಗೊಳಿಸಲಾಗಿದ್ದರೂ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ವಸೂಲಾದ ಸಾಲದ ಮೊತ್ತದ ವಿವರ ನೀಡುವಂತೆ ಬ್ಯಾಂಕ್ ಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಮಲ್ಯ ಅವರ ಅರ್ಜಿಯನ್ನು ಆಧರಿಸಿ ನ್ಯಾಯಮೂರ್ತಿ ಆರ್. ದೇವದಾಸ್ ನೇತೃತ್ವದ ಹೈಕೋರ್ಟ್ ಪೀಠ, ಬ್ಯಾಂಕ್ ಗಳು ಮತ್ತು ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಈ ಹಿಂದೆ 2024 ಡಿಸೆಂಬರ್ 18 ರಂದು ವಿಜಯ್ ಮಲ್ಯ ಅವರು ರೂ. 6,203 ಕೋಟಿ ಸಾಲದ ವಿರುದ್ಧ ಬ್ಯಾಂಕ್ ಗಳು ರೂ. 14, 131.60 ಕೋಟಿ ವಸೂಲಿ ಮಾಡಿದ್ದಾರೆ ಎಂದು ಹೇಳಿದ್ದರು. ಈಗಲೂ ಅವರು ಆರ್ಥಿಕ ಅಪರಾಧಿಯಾಗಿಯೇ ಮುಂದುವರೆದಿದ್ದು, ಲಂಡನ್ ನಲ್ಲಿದ್ದಾರೆ.

ಸಾಲ ಮರುಪಾವತಿಸದ ಆರೋಪ ಹೊತ್ತಿರುವ ವಿಜಯ್ ಮಲ್ಯ ಅವರನ್ನು ದೇಶಕ್ಕೆ ಹಸ್ತಾಂತರಿಸಲು ಭಾರತ ಸರ್ಕಾರ ಪ್ರಯತ್ನ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT