ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ನಾಲ್ಕು ಮಕ್ಕಳು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಪೊಲೀಸ್ ಸಮವಸ್ತ್ರ ಧರಿಸಿ ಮಂಗಳವಾರ ಬೆಂಗಳೂರಿನಲ್ಲಿ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್. ಅನುಚೇತ್ ಅವರಿಗೆ ನಮನ ಸಲ್ಲಿಸಿದರು. 
ರಾಜ್ಯ

ಒಂದು ದಿನ ಪೊಲೀಸ್; ಕ್ಯಾನ್ಸರ್​​ನಿಂದ ಬಳಲುತ್ತಿರುವ 4 ಮಕ್ಕಳ ಆಸೆ ಈಡೇರಿಸಿದ ಅಧಿಕಾರಿಗಳು

ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಆಫ್ ಆಂಕೋಲಾಜಿ ಸಹಯೋಗದಲ್ಲಿ ಕ್ಯಾನ್ಸರ್‌ ದಿನಾಚರಣೆಯನ್ನು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನಾಚರಣೆಯಾದ ಮಂಗಳವಾರ ಬೆಂಗಳೂರು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ನಾಲ್ಕು ಮಕ್ಕಳಿಗೆ ಒಂದು ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸುವ ಅವಕಾಶ ನೀಡಲಾಯಿತು.

ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಆಫ್ ಆಂಕೋಲಾಜಿ ಸಹಯೋಗದಲ್ಲಿ ಕ್ಯಾನ್ಸರ್‌ ದಿನಾಚರಣೆಯನ್ನು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಕ್ಯಾನ್ಸರ್‌ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್‌, ಜೀವನ್‌ ಕುಮಾರ್‌, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್‌ ಸಮವಸ್ತ್ರ ಧರಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿ 1 ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು, ಖುದ್ದು ಈ ನಾಲ್ವರು ಮಕ್ಕಳಿಗೆ ಹೂಗುಚ್ಛ ನೀಡಿ ತಮ್ಮ ಕಚೇರಿಗೆ ಸ್ವಾಗತಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ದಯಾನಂದ ಅವರು ಕ್ಯಾನ್ಸರ್ ದೇಹದ ಕಾಯಿಲೆ ಮತ್ತು ಅಪರಾಧವು ಸಮಾಜದ ಕಾಯಿಲೆ. ಪೊಲೀಸ್ ಸಿಬ್ಬಂದಿ ಅಪರಾಧವನ್ನು ಸಮಾಜದಿಂದ ತೆಗೆದುಹಾಕಲು ಹೋರಾಡುತ್ತಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026: 2ನೇ ಸೆಮಿಫೈನಲ್ ಕದನ, ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಮೋದಿ ಟೀಕೆ, ಪದೇ ಪದೇ ಗ್ಯಾರಂಟಿಗಳ ಉಲ್ಲೇಖ ಸಿದ್ದರಾಮಯ್ಯ ಬಜೆಟ್‌ನ ಮುಖ್ಯಾಂಶಗಳು: ಆರ್ ಅಶೋಕ್

ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

2025 ಆರ್ಥಿಕ ವರ್ಷದಲ್ಲಿ ಬರೋಬ್ಬರಿ 6,769 ಕೋಟಿ ರೂ. ಆದಾಯ ತೋರಿಸಿದ ಬಿಜೆಪಿ!

SCROLL FOR NEXT