ರಾಜ್ಯ

ಬಿಟ್ ಕಾಯಿನ್ ಹಗರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಗೆ ಸಂಕಷ್ಟ: SIT ನೊಟೀಸ್

ಕೆಲವು ತಿಂಗಳ ಹಿಂದೆ ಕೂಡ SIT ಅಧಿಕಾರಿಗಳು ನಲಪಾಡ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದರು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಹಾರಿಕವಾಗಿ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸಿದ್ದರು.

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ಬಂಧನ ಭೀತಿ ಎದುರಾಗಿದೆ. ಹ್ಯಾಕರ್ ಶ್ರೀಕಿ ಜೊತೆ ನಲಪಾಡ್​ಗೆ ಸಂಪರ್ಕ ಇದೆ ಹಾಗೂ ವ್ಯವಹಾರಿಕ ನಂಟು ಇತ್ತು ಎಂದು ತನಿಖೆಯಲ್ಲಿ ಬಯಲಾಗಿದ್ದು, ಆರೋಪ ಹಿನ್ನೆಲೆಯಲ್ಲಿ ನಾಳೆ ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ 41ರಡಿ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದೆ.

ಕೆಲವು ತಿಂಗಳ ಹಿಂದೆ ಕೂಡ SIT ಅಧಿಕಾರಿಗಳು ನಲಪಾಡ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದರು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಹಾರಿಕವಾಗಿ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸಿದ್ದರು.

ವಿಚಾರಣೆ ನಡೆಸಿದ್ದ ಪೊಲೀಸರು

ಪ್ರಮುಖ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ ಎನ್ನುವ ಕಾರಣಕ್ಕೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿತ್ತು. ಇದೀಗ ನಲಪಾಡ್ ಆರೋಪಿ ಎಂದು ಎಸ್‌ಐಟಿ ಹೇಳಿದೆ.

ಬಿಟ್‌ಕಾಯಿನ್ ಕೇಸ್​ನಲ್ಲಿ ನಲಪಾಡ್ ಆರೋಪಿ

ಈ ಹಿಂದೆ ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ಮಾಡಲಾಗಿತ್ತು. ಹೇಳಿಕೆ ದಾಖಲು ಮಾಡಿಕೊಂಡ ಬಳಿಕ ಪ್ರಕರಣದಲ್ಲಿ ನಲಪಾಡ್ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದೆ.

ಖುದ್ದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್

ಶ್ರೀಕಿ ಜೊತೆಗೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವ ಹಿನ್ನಲೆಯಲ್ಲಿ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ನಲಪಾಡ್‌ಗೆ ಎಸ್‌ಐಟಿ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ನಲಪಾಡ್‌ಗೆ ನೋಟಿಸ್​ ನೀಡಲಾಗಿತ್ತು.

ಆಗ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ ಈ ಬಾರಿ ನಲಪಾಡ್‌ರನ್ನೇ ಆರೋಪಿಸಿ ನೋಟಿಸ್ ನೀಡಲಾಗಿದೆ. ಸಿಐಡಿಯ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 1 ಕೋಟಿ ರೂಪಾಯಿ ವಂಚಿಸಿದ್ದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಐಪಿಎಸ್ ಅಧಿಕಾರಿ ವಂಶಿಕೃಷ್ಣ ಅವರೆದುರು ನಲಪಾಡ್​ ಹಾಜರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT