ಸಂಗ್ರಹ ಚಿತ್ರ 
ರಾಜ್ಯ

ಉಡಾನ್‌ ಯೋಜನೆಯಡಿ ರಾಜ್ಯದಲ್ಲಿ 5 ಹೊಸ ಮಿನಿ ಏರ್‌ಪೋರ್ಟ್‌ ನಿರ್ಮಾಣ!

ಉಡಾನ್‌ ಯೋಜನೆಯಡಿ ಏರ್‌ಸ್ಟ್ರಿಫ್ಸ್‌ ನಿರ್ಮಾಣಕ್ಕೆ ಕರ್ನಾಟಕದ ಬಳ್ಳಾರಿ, ಕೋಲಾರ, ಕುಶಾಲನಗರ, ರಾಯಚೂರು ಹಾಗೂ ಹಾಸನವನ್ನು ತಾತ್ಕಾಲಿಕವಾಗಿ ಗುರುತಿಸಲಾಗಿದೆ.

ಬೆಂಗಳೂರು: ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯಡಿ 5 ಹೊಸ ಏರ್‌ಸ್ಟ್ರಿಪ್‌ (ಮಿನಿ ಏರ್‌ಪೋರ್ಟ್‌) ನಿರ್ಮಾಣಕ್ಕೆ ರಾಜ್ಯದಲ್ಲಿ ಸ್ಥಳಗಳನ್ನು ನಾಗರಿಕ ವಿಮಾನಯಾನ ಸಚಿವಾಲಯವು ಗುರ್ತಿಸಿದೆ.

ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹಲ್ ಅವರು ಉತ್ತರಿಸಿದರು.

ಉಡಾನ್‌ ಯೋಜನೆಯಡಿ ಏರ್‌ಸ್ಟ್ರಿಫ್ಸ್‌ ನಿರ್ಮಾಣಕ್ಕೆ ಕರ್ನಾಟಕದ ಬಳ್ಳಾರಿ, ಕೋಲಾರ, ಕುಶಾಲನಗರ, ರಾಯಚೂರು ಹಾಗೂ ಹಾಸನವನ್ನು ತಾತ್ಕಾಲಿಕವಾಗಿ ಗುರುತಿಸಲಾಗಿದೆ. ಬೀದರ್‌, ಮೈಸೂರು, ವಿದ್ಯಾನಗರ, ಹುಬ್ಬಳ್ಳಿ, ಕಲಬುರಗಿ, ಬೆಳಗಾವಿ, ಶಿವಮೊಗ್ಗದಲ್ಲಿ ಈಗಾಗಲೇ ವಿಮಾನಗಳ ಹಾರಾಟ ಪ್ರಕ್ರಿಯೆ ಮುಂದುವರಿದಿದೆ. ವಿಜಯಪುರ ಹಾಗೂ ಕಾರವಾರದಲ್ಲಿ ಇನ್ನಷ್ಟೇ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಆರಂಭವಾಗಬೇಕಿದೆ ಎಂದು ಹೇಳಿದರು.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ಮಾತನಾಡಿ, ಈ ಐದು ಏರ್‌ಸ್ಟ್ರಿಪ್‌ಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ವಿಭಿನ್ನ ಹಂತಗಳಲ್ಲಿವೆ ಎಂದು ತಿಳಿಸಿದ್ದಾರೆ.

ಉಡಾನ್‌-ಪ್ರಾದೇಶಿಕ ಸಂಪರ್ಕ ಯೋಜನೆಯು ಮಾರುಕಟ್ಟೆ ಆಧಾರಿತವಾಗಿದೆ. ವಿಮಾನಯಾನ ಮಾರ್ಗ, ಸಂಪರ್ಕ ಸ್ಥಳಗಳು, ನಿರ್ದಿಷ್ಟ ಹಾರಾಟ ಮಾರ್ಗಗಳ ವಿಚಾರವಾಗಿ ಏರ್‌ಲೈನ್‌ ಆಪರೇಟರ್‌ಗಳ ಕಾರ್ಯಸಾಧ್ಯತಾ ಸ್ಥಿತಿಗತಿ ಆಧರಿಸಿ ನಿಯಮಿತವಾಗಿ ಬಿಡ್ಡಿಂಗ್‌ ಸುತ್ತುಗಳು ನಡೆಯಲಿವೆ. ಹಾಗೆಯೇ ವಿಮಾನಯಾನ ಸೇವೆ ಮೇಲ್ದರ್ಜೆಗೇರಿಸುವುದು, ನವೀಕರಿಸುವುದು ಸೂಕ್ತ ಬಿಡ್‌ ಹಾಗೂ ಆಯ್ದ ಏರ್‌ಲೈನ್‌ ಆಪರೇಟರ್‌ಗಳಿಗೆ ಹಂಚಿಕೆ ಮಾಡುವುದರ ಮೇಲೆ ಅವಲಂಬಿತವಾಗಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!