ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ರಾಜ್ಯ

ಬೆಂಗಳೂರು 'ಏರೋ ಇಂಡಿಯಾ 2025' ಶೋಗೆ ನಾಳೆ ಚಾಲನೆ: ನವ ಭಾರತದ ಶಕ್ತಿ, ಸಾಮರ್ಥ್ಯ, ಸ್ವಾವಲಂಬನೆಯ ಪ್ರದರ್ಶನ- ರಾಜನಾಥ್ ಸಿಂಗ್

ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ ಕ್ಷೇತ್ರದ ಸರ್ವಶ್ರೇಷ್ಠತೆಗೆ ಈ ಬಾರಿಯ ಏರ್ ಶೋ ಸಾಕ್ಷಿಯಾಗಲಿದೆ.

ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ಆಯೋಜನೆಯಾಗಿರುವ ಏಷ್ಯಾದ ಅತಿದೊಡ್ಡ 15ನೇ 'ಏರೋ ಇಂಡಿಯಾ 2025' ವೈಮಾನಿಕ ಪ್ರದರ್ಶನ' ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

ಏರ್ ಶೋ ನಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂದು ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಸಚಿವರು, ಎಚ್ ಎಎಲ್ ಘಟಕಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಏರೋ ಇಂಡಿಯಾ ನವ ಭಾರತದ 'ಶಕ್ತಿ, ಸಾಮರ್ಥ್ಯ, ಸ್ವಾವಲಂಬನೆಯ ಪ್ರದರ್ಶನವಾಗಿದೆ ಎಂದು ಹೇಳಿದರು.

ಭಾರತದ ಏರೋಸ್ಪೇಸ್ ಮತ್ತು ರಕ್ಷಣಾ ಸಾಮರ್ಥ್ಯಗಳಲ್ಲಿ 90 ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು "ಬೆಳೆಯುತ್ತಿರುವ ಜಾಗತಿಕ ವಿಶ್ವಾಸಕ್ಕೆ ಸಾಕ್ಷಿ" ಎಂದು ಬಣ್ಣಿಸಿದರು. ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ ಕ್ಷೇತ್ರದ ಸರ್ವಶ್ರೇಷ್ಠತೆಗೆ ಈ ಬಾರಿಯ ಏರ್ ಶೋ ಸಾಕ್ಷಿಯಾಗಲಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ" ಎಂದು ಸಿಂಗ್ ಹೇಳಿದರು.

ಇದು ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತದೆ ಮತ್ತು ಜಾಗತಿಕ ಪಾಲುದಾರಿಕೆಯನ್ನು ರೂಪಿಸುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು "ಸುಮಾರು 30 ದೇಶಗಳ" ರಕ್ಷಣಾ ಮಂತ್ರಿಗಳು ಅಥವಾ ಪ್ರತಿನಿಧಿಗಳು ಬಂದಿದ್ದಾರೆ. 43 ದೇಶಗಳ ವಾಯು ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳ ಉಪಸ್ಥಿತಿಯು ಭಾರತಕ್ಕೆ ಮಾತ್ರವಲ್ಲ, ಇಡೀ ಅಂತರರಾಷ್ಟ್ರೀಯ ರಕ್ಷಣಾ ಸಮುದಾಯಕ್ಕೆ ಏರೋ ಶೋ ಮಹತ್ವವನ್ನು ಮತ್ತಷ್ಟು ಎತ್ತಿ ತೋರಿಸುತ್ತದೆ . ಮಿತ್ರ ರಾಷ್ಟ್ರಗಳೊಂದಿಗೆ ಸಾಮಾನ್ಯ ಆಸಕ್ತಿಯ ಕ್ಷೇತ್ರಗಳಲ್ಲಿ ಸಹಯೋಗವನ್ನು ಹೆಚ್ಚಿಸುವುದು, ಆಳವಾದ ಸಹಕಾರ ಮತ್ತು ಹಂಚಿಕೆಯ ಪ್ರಗತಿಯನ್ನು ಬೆಳೆಸುವುದು ನಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಏರ್ ಶೋ ಕೇವಲ ತಂತ್ರಜ್ಞಾನ ಮತ್ತು ನಾವೀನ್ಯತೆಗಳ ಪ್ರದರ್ಶನವಲ್ಲ, ನಮ್ಮ ಯುವಕರಿಗೆ ಸ್ಫೂರ್ತಿಯ ಮೂಲವಾಗಿಯೂ ಕಾರ್ಯನಿರ್ವಹಿಸುತ್ತದೆ, ವೈಜ್ಞಾನಿಕ ಮನೋಧರ್ಮ ಮತ್ತು ನಾವೀನ್ಯತೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು. ಸುಮಾರು 42,000 ಚ.ಮೀಟರ್ ವಿಸ್ತ್ರೀರ್ಣದ ಪ್ರದರ್ಶನದಲ್ಲಿ ಆಯೋಜನೆಯಾಗಿರುವ ಪ್ರದರ್ಶನದಲ್ಲಿ 150 ವಿದೇಶಿ ಕಂಪನಿಗಳು ಸೇರಿದಂತೆ ಸುಮಾರು 900 ಪ್ರದರ್ಶಕರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT