ಅಂಗಡಿ ಸಿಬ್ಬಂದಿಗೆ ಚಾಕು ತೋರಿಸಿದ ಪುಡಿ ರೌಡಿ 
ರಾಜ್ಯ

Video: 'ಏಯ್.. ಸಿಗರೇಟ್ ಕೊಡೋ...'; ಅಂಗಡಿ ಸಿಬ್ಬಂದಿಗೆ ಚಾಕು ತೋರಿಸಿದ ಪುಡಿ ರೌಡಿ ಬಂಧನ!

ಆಡುಗೋಡಿಯ ರಾಜೇಂದ್ರ ನಗರದ 80 ಅಡಿ ರಸ್ತೆಯ ಪೆಟ್ಟಿಗೆ ಅಂಗಡಿಗೆ ಬಂದ ಗೌತಮ್, ಒಂದು ಪ್ಯಾಕ್ ಸಿಗರೇಟ್ ಮತ್ತು ಬೆಂಕಿ ಪೊಟ್ಟಣ ಪಡೆದುಕೊಂಡಿದ್ದ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಡಿರೌಡಿಗಳ ಅಟ್ಟಹಾಸ ಮುಂದುವರೆದಿದ್ದು, ಅಂಗಡಿ ಸಿಬ್ಬಂದಿಗೆ ಚಾಕು ತೋರಿಸಿ ಸಿಗರೇಟ್ ವಸೂಲಿ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಆಡುಗೋಡಿಯ ರಾಜೇಂದ್ರ ನಗರದ 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪೆಟ್ಟಿಗೆ ಅಂಗಡಿ ವ್ಯಾಪಾರಿಯೊಬ್ಬರಿಗೆ ಚಾಕು ತೋರಿಸಿ, ಹೆದರಿಸಿ ಪುಡಿರೌಡಿಯೋರ್ವ ಉಚಿತವಾಗಿ ಸಿಗರೇಟ್‌ ಪ್ಯಾಕೆಟ್‌ ಪಡೆದಿದ್ದಾನೆ. ಆರೋಪಿಯನ್ನು ಗೌತಮ್‌ ಎಂದು ಗುರುತಿಸಲಾಗಿದ್ದು, ಈ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?

ಕೆಲವು ದಿನಗಳ ಹಿಂದೆ ಆಡುಗೋಡಿಯ ರಾಜೇಂದ್ರ ನಗರದ 80 ಅಡಿ ರಸ್ತೆಯ ಪೆಟ್ಟಿಗೆ ಅಂಗಡಿಗೆ ಬಂದ ಗೌತಮ್, ಒಂದು ಪ್ಯಾಕ್ ಸಿಗರೇಟ್ ಮತ್ತು ಬೆಂಕಿ ಪೊಟ್ಟಣ ಪಡೆದುಕೊಂಡಿದ್ದ. ವ್ಯಾಪಾರಿ ಹಣ ಕೇಳಿದಾಗ, ನಾನು ಯಾರು ಗೊತ್ತಾ? ನನ್ನ ಬಳಿಯೇ ಹಣ ಕೇಳುತ್ತೀಯಾ? ನಾನು ಕೇಳುವುದನ್ನು ಕೊಡಬೇಕು ಎಂದು ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಗೌತಮ್‌ ಹೆದರಿಸುತ್ತಿರುವ ಮತ್ತು ಮಾಲೀಕ ಸಿಗರೇಟ್‌ ನೀಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಇದರ ಜತೆಗೆ ಅಂಗಡಿ ಮಾಲೀಕ ಆಡುಗೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಮತ್ತು ವಿಡಿಯೋ ಪರಿಶೀಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಬಳಿಯಿದ್ದ ಒಂದೂವರೆ ಅಡಿ ಉದ್ದದ ಚಾಕುವನ್ನು ಕೂಡ ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

SCROLL FOR NEXT