ಸಾಂದರ್ಭಿಕ ಚಿತ್ರ  
ರಾಜ್ಯ

ಅನಧಿಕೃತವಾಗಿ ಮೊಬೈಲ್ ಕರೆಗಳ ವಿವರ ಸಂಗ್ರಹ: ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್

ಅಕ್ರಮವಾಗಿ ಹಲವು ವ್ಯಕ್ತಿಗಳ ಮೊಬೈಲ್ ಕರೆಗಳ ವಿವರ (ಸಿಡಿಆರ್) ಪಡೆದುಕೊಂಡಿರುವ ಆರೋಪದ ಮೇಲೆ ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ‌ ಭರತ್ ರೆಡ್ಡಿ ಅವರು ನೀಡಿರುವ ದೂರಿನ ಮೇರೆಗೆ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಸುಳ್ಳು ಹೇಳಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡ ವಿರುದ್ಧ ಹೊಸದಾಗಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಅಕ್ರಮವಾಗಿ ಹಲವು ವ್ಯಕ್ತಿಗಳ ಮೊಬೈಲ್ ಕರೆಗಳ ವಿವರ (ಸಿಡಿಆರ್) ಪಡೆದುಕೊಂಡಿರುವ ಆರೋಪದ ಮೇಲೆ ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ‌ ಭರತ್ ರೆಡ್ಡಿ ಅವರು ನೀಡಿರುವ ದೂರಿನ ಮೇರೆಗೆ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಐಶ್ವರ್ಯಾ ಗೌಡ ಅವರ 5 ಹಾಗೂ ಅವರ ಪತಿಯ 2 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಅವುಗಳಲ್ಲಿದ್ದ ದತ್ತಾಂಶ ಸಂಗ್ರಹಿಸಲು ನ್ಯಾಯಾಲಯದ ಅನುಮತಿ ಪಡೆದು ಪಶ್ಚಿಮ ವಿಭಾಗದ ಸಿಇಎನ್ ಠಾಣೆಗೆ ರವಾನಿಸಿದ್ದರು.

ಮೊಬೈಲ್ ಫೋನ್‌ಗಳಲ್ಲಿರುವ ದತ್ತಾಂಶವನ್ನು ಸಂಗ್ರಹಿಸಿದಾಗ ಅದರಲ್ಲಿ ಹಲವು ವ್ಯಕ್ತಿಗಳ ಸಿಡಿಆರ್ ಪತ್ತೆಯಾಗಿವೆ. ಫೋನ್ ಕರೆ ದಾಖಲೆಗಳು ಖಾಸಗಿಯಾಗಿದ್ದು, ಸಾಮಾನ್ಯವಾಗಿ ಅಪರಾಧ ಪ್ರಕರಣಗಳ ತನಿಖೆ ನಡೆಸುವಾಗ ತನಿಖಾ ಸಂಸ್ಥೆ ಅಥವಾ ತನಿಖಾಧಿಕಾರಿಗಳು ಮಾತ್ರವೇ ಅಗತ್ಯಕ್ಕೆ ಅನುಸಾರ ಅವುಗಳನ್ನು ಪಡೆದುಕೊಳ್ಳುವ ಅವಕಾಶ ಹೊಂದಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ ಐಶ್ವರ್ಯಾ ಗೌಡ ಅಕ್ರಮವಾಗಿ ಅನೇಕ ವ್ಯಕ್ತಿಗಳ ಸಿಡಿಆರ್ ಪಡೆದುಕೊಂಡಿದ್ದಾರೆ. ಆದ್ದರಿಂದ ಐಶ್ವರ್ಯಾ ಗೌಡ ಹಾಗೂ ಆಕೆಗೆ ಸಿಡಿಆರ್ ನೀಡಿರುವ ತನಿಖಾ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಶ್ವರ್ಯಾ ಗೌಡ ಅವರು ಈ ದಾಖಲೆಗಳನ್ನು ಪಡೆಯಲು ಯಾವುದೇ ಅಧಿಕಾರ ಹೊಂದಿಲ್ಲ, ಅಧಿಕಾರಿಗಳ ಸಹಾಯದಿಂದ ಬೆದರಿಕೆ ಮತ್ತು ಹಣ ವಸೂಲಿ ಮಾಡಲು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT