ಪೊಲೀಸರು ವಶಕ್ಕೆ ಪಡೆದ ನಗದು 
ರಾಜ್ಯ

ಗದಗ: ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರ ದಾಳಿ; ನಗದು, ದಾಖಲೆ ಪತ್ರಗಳ ವಶ!

ಲೇವಾದೇವಿದಾರ ಸಂಗಮೇಶ ದೊಡ್ಡಣ್ಣನವರ್ ಅವರಿಂದ ರೂ. 26.57 ಲಕ್ಷ ರೂ. ನಗದು, ಖಾಲಿ ಚೆಕ್, ಬಾಂಡ್‌ಗಳು ಮತ್ತು ರಿಜಿಸ್ಟರ್‌ ವಶಕ್ಕೆ ಪಡೆಯಲಾಗಿದೆ.

ಗದಗ: ಗದಗ–ಬೆಟಗೇರಿ ಅವಳಿ ನಗರದಲ್ಲಿ ಮೀಟರ್​​ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ದಾಳಿ ವೇಳೆ ನಗದು, ಬಾಂಡ್‌, ಖಾಲಿ ಚೆಕ್‌ ಜಪ್ತಿ ಮಾಡಿದ್ದಾರೆ. ಕೆಲವು ವ್ಯಕ್ತಿಗಳು ಅಕ್ರಮವಾಗಿ ಸಾಲಕ್ಕೆ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಜನರನ್ನು ಪೀಡಿಸುವ ಬಗ್ಗೆ ದೂರುಗಳನ್ನು ಆಧರಿಸಿ ದಾಳಿ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

12 ಸ್ಥಳಗಳಲ್ಲಿ ದಾಳಿ ನಡೆಸಿದ್ದೇವೆ. ದಾಳಿ ವೇಳೆ ನಗದು, ಖಾಲಿ ಚೆಕ್ , ಬಾಂಡ್ ಮತ್ತು ರಿಜಿಸ್ಟಾರ್ ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಹಣ ವಸೂಲಾತಿಗೆ ಸಾಲಗಾರರಿಗೆ ಬೆದರಿಕೆ ಹಾಕುತ್ತಿದ್ದವರ ವಿರುದ್ಧವೂ ಕ್ರಮ ಕೈಗೊಂಡಿದ್ದೇವೆ. ವಿವರವಾದ ಪರಿಶೀಲನೆ ನಡೆಯುತ್ತಿದೆ ಎಂದು ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದರು.

ಲೇವಾದೇವಿದಾರ ಸಂಗಮೇಶ ದೊಡ್ಡಣ್ಣನವರ್ ಅವರಿಂದ ರೂ. 26.57 ಲಕ್ಷ ರೂ. ನಗದು, ಖಾಲಿ ಚೆಕ್, ಬಾಂಡ್‌ಗಳು ಮತ್ತು ರಿಜಿಸ್ಟರ್‌ ವಶಕ್ಕೆ ಪಡೆಯಲಾಗಿದೆ.

ಲೇವಾದೇವಿದಾರರಾದ ಯುವರಾಜ್ ಯಲ್ಲಪ್ಪ ಕರವೂರು, ರವಿ ಕೌಚಗೇರಿ ಮತ್ತು ಮಂಜುನಾಥ್ ಎಂಬುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇವರಿಂದ ನಗದು, ಖಾಲಿ ಚೆಕ್, ಬಾಂಡ್, ರಿಜಿಸ್ಟರ್, ಬ್ಯಾಂಕ್ ಪಾಸ್ ಬುಕ್ ಪತ್ತೆಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉತ್ತರ ಕನ್ನಡ ಪೊಲೀಸರೂ ಇದೇ ಕ್ರಮ ಕೈಗೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಸಿಬ್ಬಂದಿಯಿಂದ ಚಿತ್ರಹಿಂಸೆ ನೀಡಿದ ಒಂಬತ್ತು ಪ್ರಕರಣಗಳಲ್ಲಿ 39 ಜನರನ್ನು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡಗೋಡು ಪಟ್ಟಣದಲ್ಲಿ ಹೆಚ್ಚಿನ ಜನರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT