ಸಾಂದರ್ಭಿಕ ಚಿತ್ರ 
ರಾಜ್ಯ

ಆಸ್ತಿ ವಿವಾದ: ಪತಿ ಹತ್ಯೆಗೈದ ಪತ್ನಿ, ಬಂಧನ

ದಂಪತಿಗಳ ನಡುವೆ ವೈಮನಸ್ಸು ಇತ್ತೆಂದು ಹೇಳಲಾಗುತ್ತಿದ್ದು, ಬಿಡದಿ ಪೊಲೀಸ್ ಠಾಣೆಯಲ್ಲಿ ಶಾಂತಮ್ಮ ತನ್ನ ಪತಿಯ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾಳು.

ಬೆಂಗಳೂರು: 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ತನ್ನ ಸಹೋದರಿ ಹೆಸರಿಗೆ ಬರೆದ ಪತಿಯನ್ನು ಪತ್ನಿಯೊಬ್ಬಳು ಹತ್ಯೆ ಮಾಡಿರುವ ಘಟನೆಯೊಂದು ಗುರುವಾರ ನಡೆದಿದೆ.

ಚೆಲುವರಾಜು ಮೃತ ದುರ್ದೈವಿ. ಪ್ರಕರಣ ಸಂಬಂಧ ಪತ್ನಿ ಶಾಂತಮ್ಮ (50) ಅವರನ್ನು ಬಂಧನಕ್ಕೊಳಪಡಿಸಲಾಗಿದೆ. ಗುರುವಾರ ಬೆಳಿಗ್ಗೆ 9.30ರ ಸುಮಾರಿಗೆ ಪತಿಯ ಮೇಲೆ ಮರದ ದಿಮ್ಮಿಯಿಂದ ಹಲ್ಲೆ ಮಾಡಿರುವ ಮಹಿಳೆ, ನಂತರ ಆತನನ್ನುದನದ ಕೊಟ್ಟಿಗೆಗೆ ಎಳೆದೊಯ್ದು ಕೂಡಿ ಹಾಕಿದ್ದಾಳೆ. ಈ ವೇಳೆ ಅತೀವ್ರ ರಕ್ತಸ್ರಾವದಿಂದಾಗಿ ಚೆಲುವರಾಜು ಅವರು ಮೃತಪಟ್ಟಿದ್ದಾರೆ.

ಏತನ್ಮಧ್ಯೆ ಸಂಜೆ ಮನೆಗೆ ಬಂದಿರುವ ಮಗ ತಂದೆಗಾಗಿ ಹುಡುಕಾಡಿದ್ದಾನೆ. ಈ ವೇಳೆ ಕೊಟ್ಟಿಗೆಯಲ್ಲಿ ಪತ್ತೆಯಾಗಿದ್ದಾರೆ. ರಕ್ತಸ್ರಾವವಾಗಿರುವುದು, ತಂದೆ ಯಾವುದೇ ಪ್ರತಿಕ್ರಿಯೆ ನೀಡಿದ ಹಿನ್ನೆಲೆಯಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ನಡುವೆ ವೈದ್ಯಕೀಯ ಪ್ರಕರಣವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯು ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದಾಗ ಕೊಟ್ಟಿಗೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಹೇಳಿದ್ದಾರೆ. ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಶಾಂತಮ್ಮ ಅವರು ಪತಿಯ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಕೊಟ್ಟಿಗೆಗೆ ಎಳೆದುಕೊಂಡು ಹೋಗಿರುವುದು ಪತ್ತೆಯಾಗಿದೆ.

ಇದೀಗ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಮಂಡ್ಯ ಜೈಲಿನಲ್ಲಿ ಇರಿಸಲಾಗಿದೆ. ಸಂತ್ರಸ್ತನ ಮಕ್ಕಳ ಪಾತ್ರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದಂಪತಿಗಳ ನಡುವೆ ವೈಮನಸ್ಸು ಇತ್ತೆಂದು ಹೇಳಲಾಗುತ್ತಿದ್ದು, ಬಿಡದಿ ಪೊಲೀಸ್ ಠಾಣೆಯಲ್ಲಿ ಶಾಂತಮ್ಮ ತನ್ನ ಪತಿಯ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾಳೆಂದು ತಿಳಿದುಬಂದಿದೆ. ಈ ಪ್ರಕರಣಗಳು ಇನ್ನೂ ವಿಚಾರಣೆಯಲ್ಲಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪತ್ನಿ ತನ್ನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದ ಹಿನ್ನೆಲೆಯಲ್ಲಿ ಬೇಸತ್ತು ಚೆಲುವರಾಜು ಅವರು, ತನ್ನ ಆಸ್ತಿಯನ್ನು ಸಹೋದರಿ ಹೆಸರಿಗೆ ಬರೆದಿದ್ದರು ಎಂದು ತಿಳಿದುಬಂದಿದೆ. ಹೊಸೂರಿನಲ್ಲಿರುವ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಹತ್ತಿರದಲ್ಲಿದೆ ಎಂದು ತಿಳಿದುಬಂದಿದೆ.

ಸಹೋದರನ ಸಾವು ಹಿನ್ನೆಲೆಯಲ್ಲಿ ಎಚ್‌ಎಸ್‌ಆರ್ ಲೇಔಟ್ ಬಳಿಯ ಅಗರ ನಿವಾಸಿಯಾಗಿರುವ ಚೆಲುವರಾಜು ಅವರ ಸಹೋದರಿ ಶಾಂತಮ್ಮ ಮತ್ತು ಅವರ ಇಬ್ಬರು ಮಕ್ಕಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಅದು ವಿಚಾರಣೆಯಲ್ಲಿದೆ. ಅವನ ವಿರುದ್ಧದ ದೌರ್ಜನ್ಯ ಮತ್ತು ಪೊಲೀಸ್ ಪ್ರಕರಣಗಳಿಂದ ಬೇಸತ್ತ ಬಲಿಪಶು, ತನ್ನ ಹೆಂಡತಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ತನ್ನ ಆಸ್ತಿಯನ್ನು ತನ್ನ ಸಹೋದರಿಗೆ ನೀಡಿದ್ದಾಳೆ ಎಂದು ವರದಿಯಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಮುಕ್ತಾಯ: ಪಳೆಯುಳಿಕೆ ಇಂಧನ ಕೊನೆಗೊಳಿಸುವ ವಿಚಾರ ಪ್ರತಿಜ್ಞೆಯಲ್ಲಿಲ್ಲ!

'ತಾಯಿ ಎದೆ ಹಾಲಿನಲ್ಲೇ ಯುರೇನಿಯಂ ಅಂಶ, ಬಿಹಾರದಲ್ಲಿ ಶಿಶುಗಳ ಮೇಲೆ ಮಾರಕ ಪರಿಣಾಮ': ತಜ್ಞರು ಹೇಳಿದ್ದೇನು?

ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಶೀಘ್ರವೇ ಭಾರತದ ವಶ; ಗಡಿಗಳು ಬದಲಾಗಲಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್; ಪಾಕ್ ಗಡ ಗಡ!

Video: 'ಮನೆಹಾಳು ಕೆಲಸ ಬೇಡ.. ನನ್ನ ಮತ್ತು ಕುಮಾರಸ್ವಾಮಿ ನಡುವೆ ತಂದಿಡಬೇಡಿ..'; ಮಾಧ್ಯಮಗಳ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು: 7 ಕೋಟಿ ರೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಅಮಾನತು!

SCROLL FOR NEXT