ರಿಜ್ವಾನ್ ಅರ್ಷದ್ 
ರಾಜ್ಯ

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ 2024: BBMP 5 ಚಿಕ್ಕ ಪಾಲಿಕೆಗಳಾಗಿ ವಿಂಗಡಣೆ- ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್

ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪೂರ್ವ ವಲಯದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯ ಕುರಿತು ಸಾರ್ವಜನಿಕರಿಂದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಅಧ್ಯಕ್ಷ ಅರ್ಷದ್ ಸೋಮವಾರ ಉದ್ಘಾಟಿಸಿದರು.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಅಭಿವೃದ್ಧಿ ಮತ್ತು ಸುಗಮ ಆಡಳಿತಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಐದು ಚಿಕ್ಕ ಪಾಲಿಕೆಗಳಾಗಿ ವಿಂಗಡಿಸಬೇಕು ಎಂದು ಗ್ರೇಟರ್ ಬೆಂಗಳೂರು ಆಡಳಿತ ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರು ಸೋಮವಾರ ಹೇಳಿದರು.

ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪೂರ್ವ ವಲಯದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯ ಕುರಿತು ಸಾರ್ವಜನಿಕರಿಂದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಅಧ್ಯಕ್ಷ ಅರ್ಷದ್ ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಂದೇ ವೇದಿಕೆಯಲ್ಲಿ ಸಮನ್ವಯವಿದ್ದರೆ ಉತ್ತಮ ಆಡಳಿತವನ್ನು ಸಾಧಿಸಬಹುದು. ಎಲ್ಲಿ ಮತ್ತು ಯಾವ ಬದಲಾವಣೆಗಳು ಆಗಬೇಕು, ಎಲ್ಲವನ್ನೂ ಚರ್ಚಿಸಿ ಅಂತಿಮಗೊಳಿಸಬಹುದು. ಪ್ರತಿಯೊಬ್ಬರೂ ತಮ್ಮ ಸಲಹೆಗಳನ್ನು ನೀಡು ಸಾಧ್ಯವಾಗುತ್ತದೆ. ನಗರದ ಅಭಿವೃದ್ಧಿಗಾಗಿ, ಬಲಿಷ್ಠ ವ್ಯವಸ್ಥೆಯನ್ನು ಸಿದ್ಧಪಡಿಸಬೇಕು. ಇದು ಸಾರ್ವಜನಿಕರಿಗೆ ಸೌಲಭ್ಯಗಳು ಸುಲಭವಾಗಿ ಪಡೆಯುವಂತಿರಬೇಕು ಎಂದು ಹೇಳಿದರು.

ಮಸೂದೆ ಕುರಿತು ಈಗಾಗಲೇ ಚರ್ಚೆಗಳು ನಡೆದಿವೆ. ಸಮಿತಿಯು 17 ಸಭೆಗಳನ್ನು ನಡೆಸಿದೆ. ಪಾಲುದಾರರೊಂದಿಗೂ ಚರ್ಚಿಸಲಾಗಿದೆ. ಹಲವು ಆಯಾಮಗಳಲ್ಲಿ ಚರ್ಚೆ ನಡೆಸಿದ ಬಳಿಕ ಮಸೂದೆಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ನಗರದ 6 ಸ್ಥಳಗಳಲ್ಲಿ ಸಾರ್ವಜನಿಕ ಸಮಾಲೋಚನೆ ನಡೆಸಲಾಗುತ್ತಿದೆ. ನಗರ ಆಡಳಿತವು ಸವಾಲಿನದ್ದಾಗಿರುವುದರಿಂದ ಸಾರ್ವಜನಿಕರಿಂದ ಪ್ರಮುಖ ಸಲಹೆಗಳನ್ನು ಪಡೆಯಲಾಗುತ್ತಿದೆ. ಮೇಯರ್ ಅವಧಿಯನ್ನು ವಿಸ್ತರಿಸುವ ಅಗತ್ಯವೂ ಇದ್ದು, ಅದನ್ನು ಆಡಳಿತ ಸುಧಾರಣಾ ಕಾಯ್ದೆಯ ಮೂಲಕ ಮಾಡಬೇಕಾಗಿದೆ. ನಗರವನ್ನು ಪುನರ್ನಿರ್ಮಿಸಬೇಕಾಗಿದೆ, ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ವಿಪತ್ತು ಎದುರಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ಬಿಬಿಎಂಪಿ ಚುನಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಸದನದಲ್ಲಿ ಮಸೂದೆ ಮಂಡಿಸಿ, ಒಪ್ಪಿಗೆ ಪಡೆದ ನಂತರ ಚುನಾವಣಾ ದಿನಾಂಕಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT