ರಿಜ್ವಾನ್ ಅರ್ಷದ್ 
ರಾಜ್ಯ

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ 2024: BBMP 5 ಚಿಕ್ಕ ಪಾಲಿಕೆಗಳಾಗಿ ವಿಂಗಡಣೆ- ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್

ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪೂರ್ವ ವಲಯದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯ ಕುರಿತು ಸಾರ್ವಜನಿಕರಿಂದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಅಧ್ಯಕ್ಷ ಅರ್ಷದ್ ಸೋಮವಾರ ಉದ್ಘಾಟಿಸಿದರು.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಅಭಿವೃದ್ಧಿ ಮತ್ತು ಸುಗಮ ಆಡಳಿತಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಐದು ಚಿಕ್ಕ ಪಾಲಿಕೆಗಳಾಗಿ ವಿಂಗಡಿಸಬೇಕು ಎಂದು ಗ್ರೇಟರ್ ಬೆಂಗಳೂರು ಆಡಳಿತ ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರು ಸೋಮವಾರ ಹೇಳಿದರು.

ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪೂರ್ವ ವಲಯದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯ ಕುರಿತು ಸಾರ್ವಜನಿಕರಿಂದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಅಧ್ಯಕ್ಷ ಅರ್ಷದ್ ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಂದೇ ವೇದಿಕೆಯಲ್ಲಿ ಸಮನ್ವಯವಿದ್ದರೆ ಉತ್ತಮ ಆಡಳಿತವನ್ನು ಸಾಧಿಸಬಹುದು. ಎಲ್ಲಿ ಮತ್ತು ಯಾವ ಬದಲಾವಣೆಗಳು ಆಗಬೇಕು, ಎಲ್ಲವನ್ನೂ ಚರ್ಚಿಸಿ ಅಂತಿಮಗೊಳಿಸಬಹುದು. ಪ್ರತಿಯೊಬ್ಬರೂ ತಮ್ಮ ಸಲಹೆಗಳನ್ನು ನೀಡು ಸಾಧ್ಯವಾಗುತ್ತದೆ. ನಗರದ ಅಭಿವೃದ್ಧಿಗಾಗಿ, ಬಲಿಷ್ಠ ವ್ಯವಸ್ಥೆಯನ್ನು ಸಿದ್ಧಪಡಿಸಬೇಕು. ಇದು ಸಾರ್ವಜನಿಕರಿಗೆ ಸೌಲಭ್ಯಗಳು ಸುಲಭವಾಗಿ ಪಡೆಯುವಂತಿರಬೇಕು ಎಂದು ಹೇಳಿದರು.

ಮಸೂದೆ ಕುರಿತು ಈಗಾಗಲೇ ಚರ್ಚೆಗಳು ನಡೆದಿವೆ. ಸಮಿತಿಯು 17 ಸಭೆಗಳನ್ನು ನಡೆಸಿದೆ. ಪಾಲುದಾರರೊಂದಿಗೂ ಚರ್ಚಿಸಲಾಗಿದೆ. ಹಲವು ಆಯಾಮಗಳಲ್ಲಿ ಚರ್ಚೆ ನಡೆಸಿದ ಬಳಿಕ ಮಸೂದೆಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ನಗರದ 6 ಸ್ಥಳಗಳಲ್ಲಿ ಸಾರ್ವಜನಿಕ ಸಮಾಲೋಚನೆ ನಡೆಸಲಾಗುತ್ತಿದೆ. ನಗರ ಆಡಳಿತವು ಸವಾಲಿನದ್ದಾಗಿರುವುದರಿಂದ ಸಾರ್ವಜನಿಕರಿಂದ ಪ್ರಮುಖ ಸಲಹೆಗಳನ್ನು ಪಡೆಯಲಾಗುತ್ತಿದೆ. ಮೇಯರ್ ಅವಧಿಯನ್ನು ವಿಸ್ತರಿಸುವ ಅಗತ್ಯವೂ ಇದ್ದು, ಅದನ್ನು ಆಡಳಿತ ಸುಧಾರಣಾ ಕಾಯ್ದೆಯ ಮೂಲಕ ಮಾಡಬೇಕಾಗಿದೆ. ನಗರವನ್ನು ಪುನರ್ನಿರ್ಮಿಸಬೇಕಾಗಿದೆ, ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ವಿಪತ್ತು ಎದುರಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ಬಿಬಿಎಂಪಿ ಚುನಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಸದನದಲ್ಲಿ ಮಸೂದೆ ಮಂಡಿಸಿ, ಒಪ್ಪಿಗೆ ಪಡೆದ ನಂತರ ಚುನಾವಣಾ ದಿನಾಂಕಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT