ಜಪಾನಿನಲ್ಲಿ ರಂಗ ಪುಸ್ತಕ ಬಿಡುಗಡೆ  online desk
ರಾಜ್ಯ

ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ 'ಜಪಾನಿನಲ್ಲಿ ರಂಗ' ಪುಸ್ತಕ ಬಿಡುಗಡೆ

ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ, ಆರ್ಥಿಕ ಸಲಹೆಗಾರರೂ ಆಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರ ಜಪಾನಿನಲ್ಲಿ ರಂಗ ಪುಸ್ತಕ ಫೆ.10 ರಂದು ಲೋಕಾರ್ಪಣೆ ಮಾಡಲಾಯಿತು.

ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ, ಆರ್ಥಿಕ ಸಲಹೆಗಾರರೂ ಆಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರ ಜಪಾನಿನಲ್ಲಿ ರಂಗ ಪುಸ್ತಕ ಫೆ.10 ರಂದು ಲೋಕಾರ್ಪಣೆ ಮಾಡಲಾಯಿತು.

ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ್ ಭಟ್ ಕೃತಿಯನ್ನು ಲೋಕಾರ್ಪಣೆ ಮಾಡಿದರು. ಜಪಾನ್ ಬಗ್ಗೆ ಕನ್ನಡದಲ್ಲಿ ಬಂದಿರುವ ಅಪರೂಪದ ಪುಸ್ತಕ ಇದಾಗಿದ್ದು, ಜಪಾನ್ ಕುರಿತು ಸ್ಥಳೀಯ ಓದುಗರಿಗೆ ಈ ಕೃತಿ ಸಮಗ್ರ ಪರಿಚಯ ನೀಡುತ್ತದೆ.

ಕನ್ನಡದಲ್ಲಿ ಸ್ವಾರಸ್ಯಕರವಾಗಿ ಬರೆಯುವ ರಂಗಸ್ವಾಮಿಯವರು ಅತ್ಯಂತ ಅಗತ್ಯವಿದ್ದ ಕೃತಿಯೊಂದನ್ನು ಕನ್ನಡದ ಓದುಗರಿಗೆ ನೀಡಿದ್ದಾರೆ. ಕನ್ನಡದ ಮಟ್ಟಿಗೆ ಜಪಾನ್ ಕುರಿತ ಪುಸ್ತಕಗಳು ಕಡಿಮೆ ಈ ಪುಸ್ತಕ ದೊಡ್ಡ ಕೊರತೆಯನ್ನು ನೀಗಿಸುತ್ತದೆ ಎಂದು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಪತ್ರಕರ್ತ ವಿಶ್ವೇಶ್ವರ್ ಭಟ್ ಹೇಳಿದ್ದಾರೆ. ಸೀಮಾ ಪ್ರಕಾಶನದಿಂದ ಈ ಪುಸ್ತಕ ಪ್ರಕಟವಾಗಿದೆ. ಕಾರ್ಯಕ್ರಮದಲ್ಲಿ ಲೇಖಕ, ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ, ಸಾವಣ್ಣ ಪ್ರಕಾಶಕರಾದ ಜಮೀಲ್ ಸಾವಣ್ಣ ಅನುವಾದಕರಾದ ನಲ್ಲತಂಬಿ, ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

ಪುಸ್ತಕ ಅತ್ಯಂತ ಜನಪ್ರಿಯತೆ ಗಳಿಸಿದ್ದು, ಬಿಡುಗಡೆಯಾದ ಬೆನ್ನಲ್ಲೇ ಪ್ರೀ ಆರ್ಡರ್ ನಲ್ಲಿ ಖರ್ಚಾಗಿ ಮರುಮುದ್ರಣವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT