ಡಿ.ಕೆ ಶಿವಕುಮಾರ್ 
ರಾಜ್ಯ

ನೂತನ ಕೈಗಾರಿಕಾ ನೀತಿ: ಬೆಂಗಳೂರಿನ ಹೊರೆ ಕಡಿಮೆ ಮಾಡಲು ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ- ಡಿ.ಕೆ ಶಿವಕುಮಾರ್

ಬೆಂಗಳೂರಿನ ಮೇಲೆ ಹೊರೆ ತಪ್ಪಿಸಬೇಕು. ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಬೇಕು. ಬಂಡವಾಳ ಹೂಡಿಕೆದಾರರು ಬೆಂಗಳೂರಿನ ಹೊರತಾಗಿ ಇತರೆ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬಂದು ನಮಗೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಬೆಂಗಳೂರು: ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ಮೈದಾನದಲ್ಲಿ ನಡೆಯಲಿರುವ "ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಸ್ಥಳದಲ್ಲಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು. ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ಮುಟ್ಟಿದ್ದು, ನಗರದಲ್ಲಿ ವಾಹನಗಳ ಸಂಖ್ಯೆ 1.10 ಕೋಟಿಯಷ್ಟಾಗಿದೆ.

ಬೆಂಗಳೂರಿನ ಮೇಲೆ ಹೊರೆ ತಪ್ಪಿಸಬೇಕು. ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಬೇಕು. ಬಂಡವಾಳ ಹೂಡಿಕೆದಾರರು ಬೆಂಗಳೂರಿನ ಹೊರತಾಗಿ ಇತರೆ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬಂದು ನಮಗೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಇದಕ್ಕೆ ಪೂರಕವಾಗಿ ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಅವರ ತಂಡ ರಾಜ್ಯದಲ್ಲಿ ನೂತನ ಕೈಗಾರಿಕಾ ನೀತಿ ರೂಪಿಸಿದ್ದು, ಮುಖ್ಯಮಂತ್ರಿಗಳು ಸಮಾವೇಶದಲ್ಲಿ ಪ್ರಕಟಿಸಿದ್ದಾರೆ. ಈ ನೀತಿಯ ಮೂಲಕ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಜಾಗತಿಕ ನಗರವಾಗಿ ಬೆಳೆದಿದ್ದು, ಇಡೀ ಜಗತ್ತು ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಬಂಡವಾಳ ಹೂಡಿಕೆದಾರರು ನಮ್ಮ ರಾಜ್ಯಕ್ಕೆ ಬರಬೇಕು. ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡಿ, ಹೆಚ್ಚು ಅವಕಾಶ ಸೃಷ್ಟಿಸಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT