ನಮ್ಮ ಮೆಟ್ರೊ online desk
ರಾಜ್ಯ

ಪ್ರಯಾಣ ದರ ಏರಿಸಿದ್ದ ಮೆಟ್ರೋಗೇ ಶಾಕ್: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ! ದರ ಏರಿಕೆಗೆ BMRCL ಸಿಬ್ಬಂದಿಗಳಿಂದಲೇ ಆಕ್ರೋಶ

ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.

ಬೆಂಗಳೂರು: ಭಾರಿ ಪ್ರಮಾಣದಲ್ಲಿ ಪ್ರಯಾಣ ದರವನ್ನು ಏರಿಕೆ ಮಾಡಿದ್ದ ನಮ್ಮ ಮೆಟ್ರೋಗೆ ಪ್ರಯಾಣಿಕರ ಅಸಮಾಧಾನದ ಬಿಸಿ ತಟ್ಟಿದೆ.

ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.

ನೆನ್ನೆ ಒಂದೇ ದಿನ (ಫೆ.11) ರಂದು ಒಂದೇ ದಿನ ಸುಮಾರು 80 ಸಾವಿರದಷ್ಟು ಪ್ರಯಾಣಿಕರ ಸಂಖ್ಯೆಯ ಕುಸಿತವನ್ನು ಮೆಟ್ರೋ ದಾಖಲಿಸಿದೆ.

ಮೆಟ್ರೋ ಪ್ರಯಾಣ ದರ ಏರಿಕೆಯ ನಂತರ 7,78,774 ಮಂದಿ ಪ್ರಯಾಣಿಕರಿದ್ದಾರೆ. ಫೆ.4 ರಂದು 8,58,417 ಮಂದಿ ಪ್ರಯಾಣಿಸಿದ್ದರು. ಪ್ರಯಾಣಿಕರ ಸಂಖ್ಯೆ ಫೆ.10 ರಂದು 8,28,149 ರಷ್ಟಿತ್ತು. ಒಟ್ಟಾರೆ 79,643 ಮಂದಿ ಒಂದೇ ದಿನದಲ್ಲಿ ಮೆಟ್ರೋ ಪ್ರಯಾಣವನ್ನು ತೊರೆದಿದ್ದಾರೆ.

ಬೆಲೆ ಏರಿಕೆಯ ಆಧಾರ ಅರ್ಥವೇ ಆಗುತ್ತಿಲ್ಲ; ಮೆಟ್ರೋ ಸಿಬ್ಬಂದಿಯ ಆಕ್ರೋಶ!

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸ್ವತಃ ಮೆಟ್ರೋ ಸಿಬ್ಬಂದಿಗಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. " ಪ್ರಯಾಣ ದರದಲ್ಲಿ ಭಾರಿ ಏರಿಕೆಯಾಗಿರುವುದರಿಂದ ನಾನು ಮೆಟ್ರೋ ನಲ್ಲಿ ಕಚೇರಿಗೆ ಬರುವುದನ್ನು ನಿಲ್ಲಿಸಿದ್ದೇನೆ. ಯಾವ ಆಧಾರದಲ್ಲಿ ಬೆಲೆ ಏರಿಕೆ ಮಾಡಿದ್ದಾರೆ ಎಂಬುದು ನಮಗೂ ಅರ್ಥವಾಗುತ್ತಿಲ್ಲ. ನಾನು ದ್ವಿಚಕ್ರವಾಹನದಲ್ಲಿ ಕಚೇರಿಗೆ ಆಗಮಿಸಿದರೆ ಹಣ ಉಳಿಯುತ್ತದೆ. ಶೇ.46 ರಷ್ಟು ಏರಿಕೆ ಎಂದು ಹೇಳಲಾಗುತ್ತಿದೆ. ಆದರೆ ಶೇ.100 ಕ್ಕಿಂತ ಹೆಚ್ಚು ಏರಿಕೆಯಾಗಿದೆ. ದಿನಕ್ಕೆ 100 ರೂಪಾಯಿ ಕೇವಲ ಪ್ರಯಾಣಕ್ಕೆ ಖರ್ಚು ಮಾಡಲು ಸಾಧ್ಯವಿಲ್ಲ" ಎಂದು ಮೆಟ್ರೋ ಸಿಬ್ಬಂದಿಗಳೇ ಮಾಧ್ಯಮಗಳೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT