ನಮ್ಮ ಮೆಟ್ರೊ online desk
ರಾಜ್ಯ

ಪ್ರಯಾಣ ದರ ಏರಿಸಿದ್ದ ಮೆಟ್ರೋಗೇ ಶಾಕ್: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ! ದರ ಏರಿಕೆಗೆ BMRCL ಸಿಬ್ಬಂದಿಗಳಿಂದಲೇ ಆಕ್ರೋಶ

ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.

ಬೆಂಗಳೂರು: ಭಾರಿ ಪ್ರಮಾಣದಲ್ಲಿ ಪ್ರಯಾಣ ದರವನ್ನು ಏರಿಕೆ ಮಾಡಿದ್ದ ನಮ್ಮ ಮೆಟ್ರೋಗೆ ಪ್ರಯಾಣಿಕರ ಅಸಮಾಧಾನದ ಬಿಸಿ ತಟ್ಟಿದೆ.

ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.

ನೆನ್ನೆ ಒಂದೇ ದಿನ (ಫೆ.11) ರಂದು ಒಂದೇ ದಿನ ಸುಮಾರು 80 ಸಾವಿರದಷ್ಟು ಪ್ರಯಾಣಿಕರ ಸಂಖ್ಯೆಯ ಕುಸಿತವನ್ನು ಮೆಟ್ರೋ ದಾಖಲಿಸಿದೆ.

ಮೆಟ್ರೋ ಪ್ರಯಾಣ ದರ ಏರಿಕೆಯ ನಂತರ 7,78,774 ಮಂದಿ ಪ್ರಯಾಣಿಕರಿದ್ದಾರೆ. ಫೆ.4 ರಂದು 8,58,417 ಮಂದಿ ಪ್ರಯಾಣಿಸಿದ್ದರು. ಪ್ರಯಾಣಿಕರ ಸಂಖ್ಯೆ ಫೆ.10 ರಂದು 8,28,149 ರಷ್ಟಿತ್ತು. ಒಟ್ಟಾರೆ 79,643 ಮಂದಿ ಒಂದೇ ದಿನದಲ್ಲಿ ಮೆಟ್ರೋ ಪ್ರಯಾಣವನ್ನು ತೊರೆದಿದ್ದಾರೆ.

ಬೆಲೆ ಏರಿಕೆಯ ಆಧಾರ ಅರ್ಥವೇ ಆಗುತ್ತಿಲ್ಲ; ಮೆಟ್ರೋ ಸಿಬ್ಬಂದಿಯ ಆಕ್ರೋಶ!

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸ್ವತಃ ಮೆಟ್ರೋ ಸಿಬ್ಬಂದಿಗಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. " ಪ್ರಯಾಣ ದರದಲ್ಲಿ ಭಾರಿ ಏರಿಕೆಯಾಗಿರುವುದರಿಂದ ನಾನು ಮೆಟ್ರೋ ನಲ್ಲಿ ಕಚೇರಿಗೆ ಬರುವುದನ್ನು ನಿಲ್ಲಿಸಿದ್ದೇನೆ. ಯಾವ ಆಧಾರದಲ್ಲಿ ಬೆಲೆ ಏರಿಕೆ ಮಾಡಿದ್ದಾರೆ ಎಂಬುದು ನಮಗೂ ಅರ್ಥವಾಗುತ್ತಿಲ್ಲ. ನಾನು ದ್ವಿಚಕ್ರವಾಹನದಲ್ಲಿ ಕಚೇರಿಗೆ ಆಗಮಿಸಿದರೆ ಹಣ ಉಳಿಯುತ್ತದೆ. ಶೇ.46 ರಷ್ಟು ಏರಿಕೆ ಎಂದು ಹೇಳಲಾಗುತ್ತಿದೆ. ಆದರೆ ಶೇ.100 ಕ್ಕಿಂತ ಹೆಚ್ಚು ಏರಿಕೆಯಾಗಿದೆ. ದಿನಕ್ಕೆ 100 ರೂಪಾಯಿ ಕೇವಲ ಪ್ರಯಾಣಕ್ಕೆ ಖರ್ಚು ಮಾಡಲು ಸಾಧ್ಯವಿಲ್ಲ" ಎಂದು ಮೆಟ್ರೋ ಸಿಬ್ಬಂದಿಗಳೇ ಮಾಧ್ಯಮಗಳೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT