ಬಂಧನ 
ರಾಜ್ಯ

ಅಕ್ರಮ ವಾಸ, ಡ್ರಗ್ಸ್‌ ದಂಧೆ: 10 ಮಂದಿ ವಿದೇಶಿ ಪ್ರಜೆಗಳ ಬಂಧನ

10 ಮಂದಿಯಲ್ಲಿ ಇಬ್ಬರು ಮಹಿಳೆಯರಿದ್ದಾರೆ. 7 ಮಂದಿ ಅಕ್ರಮ ವಾಸ್ತವ್ಯ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ, ಮೂವರನ್ನು ಎನ್'ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ಅಕ್ರಮ ವಾಸ, ಡ್ರಗ್ಸ್ ದಂಧೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ನಗರದ 6 ವಿಭಿನ್ನ ಪೊಲೀಸ್ ಠಾಣೆಗಳಲ್ಲಿ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು 10 ಮಂದಿ ವಿದೇಶಿ ಪ್ರಜೆಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

10 ಮಂದಿಯಲ್ಲಿ ಇಬ್ಬರು ಮಹಿಳೆಯರಿದ್ದಾರೆ. 7 ಮಂದಿ ಅಕ್ರಮ ವಾಸ್ತವ್ಯ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ, ಮೂವರನ್ನು ಎನ್'ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಚಿಕ್ಕಜಾಲ ಪೊಲೀಸ್ ವ್ಯಾಪ್ತಿಯಲ್ಲಿ ಅಕ್ರಮ ವಾಸ್ತವ್ಯ ಹಿನ್ನೆಲೆಕ ಓರ್ವ ಮಹಿಳೆ ಸೇರಿದಂತೆ ಮೂವರು ವಿದೇಶಿ ಪ್ರಜೆಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಮುಂದಿನ ಕ್ರಮಗಳಿಗಾಗಿ ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲಾಗಿದೆ.

ಅದೇ ರೀತಿ ಅಮೃತಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿಯೂ ಓಬ್ಬ ವಿದೇಶಿಯನ್ನು ಬಂಧಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಓರ್ವ ಮಹಿಳೆ ಸೇರಿದಂತೆ ಮತ್ತಿಬ್ಬರು ವಿದೇಶಿಯರನ್ನು ಬಂಧಿಸಲಾಗಿದೆ. ಮತ್ತೊಬ್ಬ ವಿದೇಶಿಗನನ್ನು FRRO ನಿರ್ದೇಶನಗಳನ್ನು ಅನುಸರಿಸಿ ಆತನ ದೇಶಕ್ಕೆ ಗರಿಪಾರು ಮಾಡಲಾಗಿದೆ.

ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಅಧಿಕಾರಿಗಳು ವಿದೇಶಿಗನೊಬ್ಬನನ್ನು ಬಂಧಿಸಿದ್ದು, ಆತನಿಂದ ಸುಮಾರು ಎಂಟು ಲಕ್ಷ ರೂ. ಮೌಲ್ಯದ 55 ಗ್ರಾಂ ಎಂಡಿಎಂಎ ಹರಳುಗಳು ಸೇರಿದಂತೆ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಗೋವಿಂದಪುರ ಪೊಲೀಸ್ ವ್ಯಾಪ್ತಿ ಹಾಗೂ ಪುಟ್ಟೇನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಎನ್‌ಡಿಪಿಎಸ್ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ವಿದೇಶಿಗರನ್ನು ಬಂಧನಕ್ಕೊಳಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!