ಬಂಧನ 
ರಾಜ್ಯ

ಅಕ್ರಮ ವಾಸ, ಡ್ರಗ್ಸ್‌ ದಂಧೆ: 10 ಮಂದಿ ವಿದೇಶಿ ಪ್ರಜೆಗಳ ಬಂಧನ

10 ಮಂದಿಯಲ್ಲಿ ಇಬ್ಬರು ಮಹಿಳೆಯರಿದ್ದಾರೆ. 7 ಮಂದಿ ಅಕ್ರಮ ವಾಸ್ತವ್ಯ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ, ಮೂವರನ್ನು ಎನ್'ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ಅಕ್ರಮ ವಾಸ, ಡ್ರಗ್ಸ್ ದಂಧೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ನಗರದ 6 ವಿಭಿನ್ನ ಪೊಲೀಸ್ ಠಾಣೆಗಳಲ್ಲಿ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು 10 ಮಂದಿ ವಿದೇಶಿ ಪ್ರಜೆಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

10 ಮಂದಿಯಲ್ಲಿ ಇಬ್ಬರು ಮಹಿಳೆಯರಿದ್ದಾರೆ. 7 ಮಂದಿ ಅಕ್ರಮ ವಾಸ್ತವ್ಯ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ, ಮೂವರನ್ನು ಎನ್'ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಚಿಕ್ಕಜಾಲ ಪೊಲೀಸ್ ವ್ಯಾಪ್ತಿಯಲ್ಲಿ ಅಕ್ರಮ ವಾಸ್ತವ್ಯ ಹಿನ್ನೆಲೆಕ ಓರ್ವ ಮಹಿಳೆ ಸೇರಿದಂತೆ ಮೂವರು ವಿದೇಶಿ ಪ್ರಜೆಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಮುಂದಿನ ಕ್ರಮಗಳಿಗಾಗಿ ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲಾಗಿದೆ.

ಅದೇ ರೀತಿ ಅಮೃತಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿಯೂ ಓಬ್ಬ ವಿದೇಶಿಯನ್ನು ಬಂಧಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಓರ್ವ ಮಹಿಳೆ ಸೇರಿದಂತೆ ಮತ್ತಿಬ್ಬರು ವಿದೇಶಿಯರನ್ನು ಬಂಧಿಸಲಾಗಿದೆ. ಮತ್ತೊಬ್ಬ ವಿದೇಶಿಗನನ್ನು FRRO ನಿರ್ದೇಶನಗಳನ್ನು ಅನುಸರಿಸಿ ಆತನ ದೇಶಕ್ಕೆ ಗರಿಪಾರು ಮಾಡಲಾಗಿದೆ.

ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಅಧಿಕಾರಿಗಳು ವಿದೇಶಿಗನೊಬ್ಬನನ್ನು ಬಂಧಿಸಿದ್ದು, ಆತನಿಂದ ಸುಮಾರು ಎಂಟು ಲಕ್ಷ ರೂ. ಮೌಲ್ಯದ 55 ಗ್ರಾಂ ಎಂಡಿಎಂಎ ಹರಳುಗಳು ಸೇರಿದಂತೆ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಗೋವಿಂದಪುರ ಪೊಲೀಸ್ ವ್ಯಾಪ್ತಿ ಹಾಗೂ ಪುಟ್ಟೇನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಎನ್‌ಡಿಪಿಎಸ್ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ವಿದೇಶಿಗರನ್ನು ಬಂಧನಕ್ಕೊಳಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT