ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ: ಡಿ.ಕೆ ಶಿವಕುಮಾರ್

ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದಿರುವವರೆಲ್ಲರೂ 14 ರಿಂದ 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ.

ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದರು.

ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆಎನ್​ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಡಿಕೆಶಿ, ರಾಜಣ್ಣ ಅವರ ಮಾತಿಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ‌. 8-10 ದಿನದಲ್ಲಿ ಮುಖ್ಯಮಂತ್ರಿಗಳೇ ಪ್ರತಿಕ್ರಿಯೆ ಕೊಡುತ್ತಾರೆ. ಮೈಸೂರಿನ ನೆಲದಲ್ಲಿ ನಿಂತು ಹೇಳುತ್ತಿದ್ದೇನೆ, ಪೊಲೀಸರದ್ದು ತಪ್ಪಿಲ್ಲ. ಎಲ್ಲಾ ಮಾಹಿತಿ ಪಡೆದಿದ್ದೇನೆ, ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದರು.

ಘಟನೆಯಲ್ಲಿ ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಡಿಕೆ ಶಿವಕುಮಾರ್​ ಹೇಳಿದರು.

ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದಿರುವವರೆಲ್ಲರೂ 14 ರಿಂದ 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ನಿಯಂತ್ರಣ ಮಾಡಿದ್ದಾರೆ. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದರು.

ಇನ್ನು ಇದೇ ವೇಳೆ ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಬಿಜೆಪಿ ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದೆ. ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಕೇಂದ್ರ ವ್ಯಾಪ್ತಿಗೆ ಬರುತ್ತೆ. ದರ ಏರಿಕೆಗೆ ನೇಮಿಸಿರುವ ಮುಖ್ಯಸ್ಥರು ಅದನ್ನು ನಿರ್ಧಾರ ಮಾಡ್ತಾರೆ. ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT