ಸಚಿವ ರಾಜಣ್ಣ 
ರಾಜ್ಯ

ಉದಯಗಿರಿ ಗಲಭೆ: ಅಷ್ಟೂ ಕಾಮನ್ ಸೆನ್ಸ್ ಇಲ್ವಾ; ಪೊಲೀಸರ ವಿರುದ್ಧ ಸಚಿವ ರಾಜಣ್ಣ ಗರಂ

ಪೊಲೀಸರಿಗೆ ಕನಿಷ್ಠ ಸಾಮಾನ್ಯ ಇಲ್ಲವೇ? ಆರೋಪಿ ಬಂಧನದ ನಂತರ ನಡೆದ ಎಲ್ಲಾ ಘಟನೆಗಳಿಗೆ ಪೊಲೀಸರೇ ಕಾರಣ.

ಬೆಂಗಳೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧವೇ ಸಚಿವ ರಾಜಣ್ಣ ಅವರು ತೀವ್ರ ಗರಂ ಆಗಿದ್ದಾರೆ.

ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ಕನಿಷ್ಠ ಸಾಮಾನ್ಯ ಇಲ್ಲವೇ? ಆರೋಪಿ ಬಂಧನದ ನಂತರ ನಡೆದ ಎಲ್ಲಾ ಘಟನೆಗಳಿಗೆ ಪೊಲೀಸರೇ ಕಾರಣ ಎಂದು ಕಿಡಿಕಾರಿದರು.

ಯಾರೋ ಒಬ್ಬ ಈ ಕೃತ್ಯ ಎಸಗಿದ್ದಾನೆ. ಕಾನೂನು ಪ್ರಕಾರ ಅವನು ಮಾಡಿದ್ದು ತಪ್ಪು. ಹೀಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧಿತನನ್ನು ಉದಯಗಿರಿ ಪೊಲೀಸ್ ಠಾಣೆಯಲ್ಲೇಕೆ ಇಡಬೇಕಿತ್ತು? ಉದಯಗಿರಿ ಪ್ರದೇಶ ಮುಸ್ಲಿಮರು ಹೆಚ್ಚಿರುವ ಸ್ಥಳ. ಸಹಜವಾಗಿ ಜನ ಒಟ್ಟಾಗಿ ಸೇರಿದ್ದಾರೆ. ಗಲಾಟೆ ಮಾಡಿದ್ದಾರೆಂದು ಹೇಳಿದ್ದಾರೆ.

ಪೊಲೀಸರಿಗೆ ಉದಯಗಿರಿ ಠಾಣೆ ಬದಲು ಬೇರೆ ಠಾಣೆಯಲ್ಲಿ ಇಡಲು ಏನಾಗಿತ್ತು? ಅಷ್ಟು ಕಾಮನ್ ಸನ್ಸ್ ಇಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಲಸಕ್ಕೆ ಬಾರದವರು, ದಾರಿಹೋಕರಿಗೂ ಗೊತ್ತಿರುವಂತಹ ಪ್ರಾಥಮಿಕ ವಿಚಾರ ದೊಡ್ಡ ದೊಡ್ಡ ಬ್ಯಾಡ್ಜ್ ಹಾಕಿಕೊಂಡು ಹಿಂದೆ-ಮುಂದೆ ಹತ್ತಾರು ಸಿಬ್ಬಂದಿಗಳನ್ನು ಇಟ್ಟುಕೊಂಡು ಓಡಾಡುತ್ತಿರುವ ಪೊಲೀಸರಿಗೆ ಗೊತ್ತಾಗದೇ ಇರುವುದು ವಿಷಾದಕರ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT