ಕರ್ನಾಟಕ ಚಲನಚಿತ್ರ ಅಕಾಡೆಮಿ ಲೊಗೊ 
ರಾಜ್ಯ

ಪತ್ರಕರ್ತ ಹೆಚ್. ದೇಶಾದ್ರಿ ಸೇರಿದಂತೆ ಏಳು ಮಂದಿ ರಾಜ್ಯ ಚಲನಚಿತ್ರ ಅಕಾಡೆಮಿ ಸದಸ್ಯರಾಗಿ ನೇಮಕ

ಪತ್ರಿಕೋದ್ಯಮ, ಸಿನಿಮಾ ಕ್ಷೇತ್ರದ ಪ್ರತಿನಿಧಿಗಳನ್ನು ಸಾಮಾನ್ಯ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಸದಸ್ಯರಾಗಿ ಏಳು ಮಂದಿಯನ್ನು ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪತ್ರಿಕೋದ್ಯಮ, ಸಿನಿಮಾ ಕ್ಷೇತ್ರದ ಪ್ರತಿನಿಧಿಗಳನ್ನು ಸಾಮಾನ್ಯ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲಾಗಿದೆ.

ಹಿರಿಯ ಪತ್ರಕರ್ತರಾದ ಕೊಪ್ಪಳದ ಸಾವಿತ್ರಿ ಮಜುಂದಾರ್, ಶಿವಮೊಗ್ಗದ ನಮ್ಮ ನಾಡು ಕನ್ನಡ ಡೈಲಿಯ ಸಿನಿಮಾ ವಿಶ್ಲೇಷಕ ಹೆಚ್ ದೇಶಾದ್ರಿ, ಚಿದಾನಂದ ಪಟೇಲ್ ಹಾಗೂ ಸಿನಿಮಾ ಕಲಾವಿದರಾದ ನಿಖಿತಾಸ್ವಾಮಿ, ಸಿನಿಮಾ ಪ್ರಚಾರ ಡಿ.ಜಿ. ವೆಂಕಟೇಶ್, ಚಿತ್ರೋದ್ಯಮಿ ವಿಷ್ಣು ಕುಮಾರ್ ಹಾಗೂ ಸಿನಿಮಾ ತಂತ್ರಜ್ಞರಾದ ಐವಾನ್ ಡಿಸಿಲ್ವ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಮಿತಿಯ ಸದಸ್ಯರುಗಳನ್ನಾಗಿ ನೇಮಿಸಲಾಗಿದೆ.

ಸರ್ಕಾರದ ಮುಂದಿನ ಆದೇಶದವರೆಗೂ ನೂತನ ಸದಸ್ಯರು ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಆದೇಶ ಪತ್ರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT