ಕುರುಬೂರು ಶಾಂತಕುಮಾರ್ 
ರಾಜ್ಯ

ರೈತ ಮುಖಂಡ ಕುರುಬೂರು ಶಾಂತಕುಮಾರ್ ಚಂಡೀಗಢದಿಂದ ಬೆಂಗಳೂರಿಗೆ ಏರ್ ಲಿಫ್ಟ್: ಮಣಿಪಾಲ್ ಆಸ್ಪತ್ರೆಗೆ ದಾಖಲು

ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಶಾಂತಕುಮಾರ್, ಪಟಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಭಾನುವಾರ ಬೆಂಗಳೂರಿಗೆ ಕರೆತರಲಾಗಿದೆ.

ಇದೀಗ ಶಾಂತಕುಮಾರ್ ಅವರನ್ನು ಚಿಕಿತ್ಸೆಗಾಗಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಶಾಂತಕುಮಾರ್, ಪಟಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಬೆನ್ನುಮೂಳೆಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸಿದ್ದರಾಮಯ್ಯ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಈ ಮಧ್ಯೆ, ಕರ್ನಾಟಕ ಭವನ, ದೆಹಲಿಯ ನಿವಾಸಿ ಆಯುಕ್ತ ಇಮ್ಕೊಂಗ್ಲಾ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪಟಿಯಾಲಾ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಅಧಿಕಾರಿಗಳು ಶನಿವಾರ ಏರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದರು. ವೈದ್ಯರು ಮತ್ತು ಇಬ್ಬರು ಸಹಾಯಕರ ತಂಡದೊಂದಿಗೆ ಶಾಂತಕುಮಾರ್ ಅವರನ್ನು ಇಂದು ಬೆಂಗಳೂರಿಗೆ ಕರೆತರಲಾಯಿತು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT