ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪ್ರಿಯಕರನ ಜೊತೆ ಪತ್ನಿ ಅನೈತಿಕ ಸಂಬಂಧ; ನೊಂದು ಪತಿ ನೇಣಿಗೆ ಶರಣು!

ಬಸವರಾಜ್ ಮತ್ತು ಉಮಾ ಮದುವೆಯಾಗಿ ಆರು ವರ್ಷಗಳಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗಿದ್ದರೂ ಉಮಾ ಪ್ರಿಯಕರನ ಸಹವಾಸ ಮುಂದುವರೆಸಿದ್ದಳು.

ದಾವಣಗೆರೆ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಾವಣೆಗರೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 37 ವರ್ಷದ ಬಸವರಾಜ್ ಎಂದು ಗುರುತಿಸಲಾಗಿದೆ. ಡೆಟ್ ನೋಟ್ ಬರೆದಿಟ್ಟು ಬಸವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆಟ್ ನೋಟ್ ನಲ್ಲಿ ನನ್ನ ಸಾವಿಗೆ ನನ್ನ ಪತ್ನಿ ಉಮಾ ಹಾಗೂ ಆಕೆಯ ಪ್ರಿಯಕರ ಕಾರಣ. ಇಬ್ಬರು ಕಠಿಣ ಶಿಕ್ಷೆಯಾಗಲಿದೆ. ನನ್ನಿಬ್ಬರು ಮಕ್ಕಳನ್ನು ನನ್ನ ಸಹೋದರಿಗೆ ನೀಡಿ ಎಂದು ಬರೆದಿದ್ದಾರೆ.

ಬಸವರಾಜ್ ಮತ್ತು ಉಮಾ ಮದುವೆಯಾಗಿ ಆರು ವರ್ಷಗಳಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗಿದ್ದರೂ ಉಮಾ ಪ್ರಿಯಕರನ ಸಹವಾಸ ಮುಂದುವರೆಸಿದ್ದಳು. ಅವನ ಸಹವಾಸ ಬಿಟ್ಟುಬಿಡು ಎಂದು ಎಷ್ಟೇ ಹೇಳಿದರೂ ಕೇಳದೆ ಅವನ ಜೊತೆ ಅನೈತಿಕ ಸಂಬಂಧ ಮುಂದುವರೆಸಿದ್ದಳು. ಹೀಗಾಗಿ ಮನನೊಂದು ಬಸವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಪ್ರಕರಣ ಸಂಬಂಧ ಪೊಲೀಸರು ಉಮಾಳನ್ನು ಬಂಧಿಸಿದ್ದು ಆಕೆಯ ಪ್ರಿಯಕರನಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ Indian Army ಎಚ್ಚರಿಕೆ!

Operation Sindoor: ಪಾಕಿಸ್ತಾನದ ಐದು ಹೈಟೆಕ್ ಫೈಟರ್‌, ಎಫ್-16, ಜೆಎಫ್-17, ಅನೇಕ ಜೆಟ್‌ಗಳು ನಾಶ- IAF ಮುಖ್ಯಸ್ಥ; Video

"ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ, ನನ್ನ ಅದೃಷ್ಟದ ಮನೆ ಬೇರೆಯದ್ದೇ ಇದೆ..; 2 ಬಾರಿ ಮುಖ್ಯಮಂತ್ರಿಯಾಗಲು ಅದೇ ಕಾರಣ"- Siddaramaiah

1st test: ಕೊನೆಗೂ ನೀಗಿದ ಬರ, 9 ವರ್ಷಗಳ ಬಳಿಕ ತವರಿನಲ್ಲಿ ಕನ್ನಡಿಗ KL Rahul ಶತಕ!

ಆಗ್ರಾ: ದುರ್ಗಾ ಮೂರ್ತಿ ವಿಸರ್ಜನೆ ವೇಳೆ 17 ಯುವಕರು ನೀರು ಪಾಲು

SCROLL FOR NEXT