ಬಂಧನ 
ರಾಜ್ಯ

CM ಕಚೇರಿ ಲೆಟರ್ ಹಾಗೂ ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಪೋಸ್ಟಿಂಗ್ ಕೊಡಿಸುವುದಾಗಿ ಆರೋಪಿ ರಾಘವೇಂದ್ರ ಅಧಿಕಾರಿಯ ಬಳಿ ಹಣ ಪಡೆದು ವಂಚಿಸಿದ್ದ. ಅಲ್ಲದೆ ರಾಜಕಾರಣಿಗಳ ಬಳಿ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದವರಿಗೂ ವಂಚಿಸಿದ್ದ ಎನ್ನಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ.

ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ಈತ ಈ ಹಿಂದೆ ಶಾಸಕರ ಖಾಸಗಿ ಸಹಾಯಕರ ಬಳಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ನಕಲಿ ಸಿಎಂ ಕಚೇರಿ ಪತ್ರ ಮತ್ತು ಸಹಿಯನ್ನು ಬಳಸಿದ್ದರ ವಿರುದ್ಧ ವಿಧಾನಸೌಧದ ಕಾರ್ಯದರ್ಶಿ ದೂರು ದಾಖಲಿಸಿದ ನಂತರ ಆತನನ್ನು ಇತ್ತೀಚೆಗೆ ಬಂಧಿಸಲಾಗಿದೆ.

ಪೋಸ್ಟಿಂಗ್ ಕೊಡಿಸುವುದಾಗಿ ಆರೋಪಿ ರಾಘವೇಂದ್ರ ಅಧಿಕಾರಿಯ ಬಳಿ ಹಣ ಪಡೆದು ವಂಚಿಸಿದ್ದ. ಅಲ್ಲದೆ ರಾಜಕಾರಣಿಗಳ ಬಳಿ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದವರಿಗೂ ವಂಚಿಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿ ರಾಘವೇಂದ್ರನನ್ನು ವಿಚಾರಣೆ ನಡೆಸುತ್ತಿದ್ದಾರೆ.

ರಾಘವೇಂದ್ರ ಶಿಫಾರಸು ಪತ್ರದ ಭರವಸೆ ನೀಡಿ ಕೆಲವು ಲಕ್ಷಗಳಿಗೆ ಬೇಡಿಕೆ ಇಟ್ಟಿದ್ದ. ಹಲವು ಅಧಿಕಾರಿಗಳು ಹಣ ಪಾವತಿಸಿದ್ದಾರೆ ಎನ್ನಲಾಗಿದೆ, ನಂತರ ರಾಘವೇಂದ್ರ ಅವರಿಗೆಲ್ಲಾ ಮುಖ್ಯಮಂತ್ರಿಗಳ ನಕಲಿ ಸಹಿಯೊಂದಿಗೆ ನಕಲಿ ಪತ್ರವನ್ನು ನೀಡಿದ್ದಾನೆ. ಈ ಪತ್ರವನ್ನು ವಾಟ್ಸಾಪ್ ಮೂಲಕ ಅಧಿಕಾರಿಯೊಬ್ಬರಿಗೆ ಕಳುಹಿಸಿದಾಗ, ಅದು ನಕಲಿ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ಪೊಲೀಸರು ಈ ಹಿಂದೆ ಅನೇಕ ಜನರಿಗೆ ಮೋಸ ಮಾಡಿದ್ದಾನೆಂದು ತಿಳಿದುಕೊಂಡರು, ಆದರೆ ಇದು ಅವನ ವಿರುದ್ಧ ದಾಖಲಾಗಿರುವ ಮೊದಲ ದೂರು. ಆದಾಗ್ಯೂ, ಕೆಎಎಸ್ ಅಧಿಕಾರಿ ಎಷ್ಟು ಹಣ ಪಾವತಿಸಿದ್ದಾರೆ ಎಂಬ ಬಗ್ಗೆ ನಿಖರವಾದ ವಿವರ ಪೊಲೀಸರು ಬಹಿರಂಗಪಡಿಸಿಲ್ಲ. ರಾಘವೇಂದ್ರ ವಿರುದ್ಧ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT