ಬಂಧನ 
ರಾಜ್ಯ

CM ಕಚೇರಿ ಲೆಟರ್ ಹಾಗೂ ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಪೋಸ್ಟಿಂಗ್ ಕೊಡಿಸುವುದಾಗಿ ಆರೋಪಿ ರಾಘವೇಂದ್ರ ಅಧಿಕಾರಿಯ ಬಳಿ ಹಣ ಪಡೆದು ವಂಚಿಸಿದ್ದ. ಅಲ್ಲದೆ ರಾಜಕಾರಣಿಗಳ ಬಳಿ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದವರಿಗೂ ವಂಚಿಸಿದ್ದ ಎನ್ನಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ.

ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ಈತ ಈ ಹಿಂದೆ ಶಾಸಕರ ಖಾಸಗಿ ಸಹಾಯಕರ ಬಳಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ನಕಲಿ ಸಿಎಂ ಕಚೇರಿ ಪತ್ರ ಮತ್ತು ಸಹಿಯನ್ನು ಬಳಸಿದ್ದರ ವಿರುದ್ಧ ವಿಧಾನಸೌಧದ ಕಾರ್ಯದರ್ಶಿ ದೂರು ದಾಖಲಿಸಿದ ನಂತರ ಆತನನ್ನು ಇತ್ತೀಚೆಗೆ ಬಂಧಿಸಲಾಗಿದೆ.

ಪೋಸ್ಟಿಂಗ್ ಕೊಡಿಸುವುದಾಗಿ ಆರೋಪಿ ರಾಘವೇಂದ್ರ ಅಧಿಕಾರಿಯ ಬಳಿ ಹಣ ಪಡೆದು ವಂಚಿಸಿದ್ದ. ಅಲ್ಲದೆ ರಾಜಕಾರಣಿಗಳ ಬಳಿ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದವರಿಗೂ ವಂಚಿಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿ ರಾಘವೇಂದ್ರನನ್ನು ವಿಚಾರಣೆ ನಡೆಸುತ್ತಿದ್ದಾರೆ.

ರಾಘವೇಂದ್ರ ಶಿಫಾರಸು ಪತ್ರದ ಭರವಸೆ ನೀಡಿ ಕೆಲವು ಲಕ್ಷಗಳಿಗೆ ಬೇಡಿಕೆ ಇಟ್ಟಿದ್ದ. ಹಲವು ಅಧಿಕಾರಿಗಳು ಹಣ ಪಾವತಿಸಿದ್ದಾರೆ ಎನ್ನಲಾಗಿದೆ, ನಂತರ ರಾಘವೇಂದ್ರ ಅವರಿಗೆಲ್ಲಾ ಮುಖ್ಯಮಂತ್ರಿಗಳ ನಕಲಿ ಸಹಿಯೊಂದಿಗೆ ನಕಲಿ ಪತ್ರವನ್ನು ನೀಡಿದ್ದಾನೆ. ಈ ಪತ್ರವನ್ನು ವಾಟ್ಸಾಪ್ ಮೂಲಕ ಅಧಿಕಾರಿಯೊಬ್ಬರಿಗೆ ಕಳುಹಿಸಿದಾಗ, ಅದು ನಕಲಿ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ಪೊಲೀಸರು ಈ ಹಿಂದೆ ಅನೇಕ ಜನರಿಗೆ ಮೋಸ ಮಾಡಿದ್ದಾನೆಂದು ತಿಳಿದುಕೊಂಡರು, ಆದರೆ ಇದು ಅವನ ವಿರುದ್ಧ ದಾಖಲಾಗಿರುವ ಮೊದಲ ದೂರು. ಆದಾಗ್ಯೂ, ಕೆಎಎಸ್ ಅಧಿಕಾರಿ ಎಷ್ಟು ಹಣ ಪಾವತಿಸಿದ್ದಾರೆ ಎಂಬ ಬಗ್ಗೆ ನಿಖರವಾದ ವಿವರ ಪೊಲೀಸರು ಬಹಿರಂಗಪಡಿಸಿಲ್ಲ. ರಾಘವೇಂದ್ರ ವಿರುದ್ಧ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

SCROLL FOR NEXT