ಸಂಗ್ರಹ ಚಿತ್ರ 
ರಾಜ್ಯ

ರಾಜ್ಯ ಬಜೆಟ್ 2025: ರೈತ ಮುಖಂಡರ ಜೊತೆ ಸಿದ್ದರಾಮಯ್ಯ ಸಭೆ; ಅನ್ನದಾತರ ಬೇಡಿಕೆಗಳಿಗೆ ಮೊದಲ ಆದ್ಯತೆ ಎಂದ ಸಿಎಂ

ಕೃಷಿ ವಲಯವು ಹೆಚ್ಚಿನ ಸಂಖ್ಯೆಯ ಉದ್ಯೋಗಗಳನ್ನು ಒದಗಿಸುತ್ತದೆ. ರೈತರು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಲಾಗುವುದು.

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್'ಗೆ ಸಿದ್ಧತೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರೈತ ಮುಖಂಡರೊಂದಿಗೆ ಸಭೆ ನಡೆಸಿ, ಮಾತುಕತೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ವಲಯವು ಹೆಚ್ಚಿನ ಸಂಖ್ಯೆಯ ಉದ್ಯೋಗಗಳನ್ನು ಒದಗಿಸುತ್ತದೆ. ರೈತರು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ರೈತರ ಸಂಕಷ್ಟಗಳು ಮತ್ತು ಸಲಹೆಗಳನ್ನು ಆಲಿಸಿದ್ದೇನೆ. ನಮ್ಮ ಮಿತಿಗಳೊಂದಿಗೆ ಅವರ ಸಲಹೆಗಳನ್ನು ಸೇರಿಸುತ್ತೇವೆ. ಇದಲ್ಲದೆ, ಕರ್ನಾಟಕದ ರೈತರ ಕಲ್ಯಾಣವನ್ನು ಎತ್ತಿಹಿಡಿಯುವ ವಿಷಯದಲ್ಲಿ ನಮ್ಮ ಸರ್ಕಾರ ಹಿಂದೆ ಸರಿದಿಲ್ಲ. ನಾವು ಯಾವಾಗಲೂ ರೈತರ ಪರವಾಗಿರುತ್ತೇವೆ. ನಮ್ಮ ಬಜೆಟ್ ಕೃಷಿ ಮತ್ತು ಅದರ ಅಭಿವೃದ್ಧಿಯ ಪರವಾಗಿರುತ್ತದೆ ಎಂದು ಹೇಳಿದರು.

ಕರ್ನಾಟಕದ ಅನೇಕ ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!