ಸಾಂದರ್ಭಿಕ ಚಿತ್ರ 
ರಾಜ್ಯ

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

4 ಲಕ್ಷ ರೂ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌

ಹುಬ್ಬಳ್ಳಿ: ಅಂಗನವಾಡಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪ ಸಂಬಂಧ 18 ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ‌ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌ ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್​ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಇದರಲ್ಲಿ ಒಟ್ಟು 329 ಚೀಲಗಳಲಿದ್ದ 8 ಟನ್ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಬಂಧಿತರನ್ನು ಧಾರವಾಡದ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದಗೌಸ್​ ಖಲೀಪಾ,‌ ಗೌತಮಸಿಂಗ​ ಠಾಕೂರ್​, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದಂತೆ 18‌ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಆಹಾರ ಪದಾರ್ಥಗಳ ಅಕ್ರಮ ಸಂಗ್ರಹ ಹಾಗೂ ಮಾರಾಟ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದಾಗ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!