ಸಾಂದರ್ಭಿಕ ಚಿತ್ರ 
ರಾಜ್ಯ

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

4 ಲಕ್ಷ ರೂ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌

ಹುಬ್ಬಳ್ಳಿ: ಅಂಗನವಾಡಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪ ಸಂಬಂಧ 18 ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ‌ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌ ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್​ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಇದರಲ್ಲಿ ಒಟ್ಟು 329 ಚೀಲಗಳಲಿದ್ದ 8 ಟನ್ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಬಂಧಿತರನ್ನು ಧಾರವಾಡದ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದಗೌಸ್​ ಖಲೀಪಾ,‌ ಗೌತಮಸಿಂಗ​ ಠಾಕೂರ್​, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದಂತೆ 18‌ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಆಹಾರ ಪದಾರ್ಥಗಳ ಅಕ್ರಮ ಸಂಗ್ರಹ ಹಾಗೂ ಮಾರಾಟ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದಾಗ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT