ಒಂದೇ ಕುಟುಂಬದ ಮೂವರು ಆತ್ಮಹತ್ಯೆ 
ರಾಜ್ಯ

ಮೈಸೂರು: ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಮೂರು ಬಲಿ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಪೊಲೀಸರ ಪ್ರಕಾರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್‌ಲೈನ್ ಗೇಮಿಂಗ್‌ನಲ್ಲಿ ಬೆಟ್ಟಿಂಗ್ ಮಾಡುವ ಮೂಲಕ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದರು.

ಮೈಸೂರು: ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ ಸಮೀಪದ ಹಂಚ್ಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಜೋಶ್ ಆಂಥೋನಿ, ಅವರ ಸಹೋದರ ಜೋಬಿ ಆಂಥೋನಿ ಮತ್ತು ಪತ್ನಿ ಶರ್ಮಿಳಾ ಅಲಿಯಾಸ್ ಸ್ವಾತಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್‌ಲೈನ್ ಗೇಮಿಂಗ್‌ನಲ್ಲಿ ಬೆಟ್ಟಿಂಗ್ ಮಾಡುವ ಮೂಲಕ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದರು.

ಹಣವನ್ನು ಸಾಲವಾಗಿ ನೀಡಿದ್ದವರು ವಾಪಸ್ ಹಣ ನೀಡುವಂತೆ ಒತ್ತಾಯಿಸುತ್ತಿದ್ದರು. ಹೀಗಾಗಿ ತೀವ್ರ ಒತ್ತಡದಲ್ಲಿದ್ದ ಜೋಶ್ ಆಂಥೋನಿ ಫೆಬ್ರವರಿ 17 (ಸೋಮವಾರ) ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಾಯುವ ಮೊದಲು, ಜೋಬಿ ಆಂಥೋನಿ ಮತ್ತು ಶರ್ಮಿಳಾ ತಮ್ಮ ಸಹೋದರಿಯ ಹೆಸರನ್ನು ಬಳಸಿಕೊಂಡು ಸಾಲ ಪಡೆದಿದ್ದಾರೆ ಎಂದು ಆರೋಪಿಸಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ.

ನನ್ನ ಸಹೋದರಿಗೆ ಗಂಡ ಇಲ್ಲ, ಮತ್ತು ಜೋಬಿ ಮತ್ತು ಅವನ ಹೆಂಡತಿ ನನ್ನ ಸಹೋದರಿಗೆ ವಂಚನೆ ಮಾಡಿದ್ದಾರೆ. ನನ್ನ ಸಾವಿಗೆ ನನ್ನ ಸಹೋದರ ಜೋಬಿ ಆಂಥೋನಿ ಮತ್ತು ಅವನ ಹೆಂಡತಿ ಶರ್ಮಿಳಾ ಕಾರಣ. ಅವರಿಗೆ ಶಿಕ್ಷೆಯಾಗಬೇಕು ಎಂದು ಜೋಶ್ ವೀಡಿಯೊದಲ್ಲಿ ಹೇಳಿದ್ದಾರೆ.

ಜೋಶ್ ಆತ್ಮಹತ್ಯೆಯ ಬಗ್ಗೆ ತಿಳಿದ ನಂತರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಕೂಡ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ , ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ಆನ್‌ಲೈನ್ ಬೆಟ್ಟಿಂಗ್ ಆಟಗಳನ್ನು ನಿಷೇಧಿಸುವ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿಯನ್ನು ಮಾಡಿತ್ತು. ಆನ್ ಲೈನ್ ಬೆಟ್ಟಿಂಗ್ ಕುಟುಂಬಗಳನ್ನು ಹಾಳು ಮಾಡುತ್ತಿದೆ. ಹೀಗಾಗಿ ಆಡಳಿತಾರೂಢ ಬಿಜೆಪಿ ಆನ್‌ಲೈನ್ ಬೆಟ್ಟಿಂಗ್ ಅನ್ನು ಅನುಮತಿಸುವುದಿಲ್ಲ ಎಂದು ಘೋಷಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT