ಒಂದೇ ಕುಟುಂಬದ ಮೂವರು ಆತ್ಮಹತ್ಯೆ 
ರಾಜ್ಯ

ಮೈಸೂರು: ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಮೂರು ಬಲಿ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಪೊಲೀಸರ ಪ್ರಕಾರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್‌ಲೈನ್ ಗೇಮಿಂಗ್‌ನಲ್ಲಿ ಬೆಟ್ಟಿಂಗ್ ಮಾಡುವ ಮೂಲಕ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದರು.

ಮೈಸೂರು: ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ ಸಮೀಪದ ಹಂಚ್ಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಜೋಶ್ ಆಂಥೋನಿ, ಅವರ ಸಹೋದರ ಜೋಬಿ ಆಂಥೋನಿ ಮತ್ತು ಪತ್ನಿ ಶರ್ಮಿಳಾ ಅಲಿಯಾಸ್ ಸ್ವಾತಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್‌ಲೈನ್ ಗೇಮಿಂಗ್‌ನಲ್ಲಿ ಬೆಟ್ಟಿಂಗ್ ಮಾಡುವ ಮೂಲಕ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದರು.

ಹಣವನ್ನು ಸಾಲವಾಗಿ ನೀಡಿದ್ದವರು ವಾಪಸ್ ಹಣ ನೀಡುವಂತೆ ಒತ್ತಾಯಿಸುತ್ತಿದ್ದರು. ಹೀಗಾಗಿ ತೀವ್ರ ಒತ್ತಡದಲ್ಲಿದ್ದ ಜೋಶ್ ಆಂಥೋನಿ ಫೆಬ್ರವರಿ 17 (ಸೋಮವಾರ) ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಾಯುವ ಮೊದಲು, ಜೋಬಿ ಆಂಥೋನಿ ಮತ್ತು ಶರ್ಮಿಳಾ ತಮ್ಮ ಸಹೋದರಿಯ ಹೆಸರನ್ನು ಬಳಸಿಕೊಂಡು ಸಾಲ ಪಡೆದಿದ್ದಾರೆ ಎಂದು ಆರೋಪಿಸಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ.

ನನ್ನ ಸಹೋದರಿಗೆ ಗಂಡ ಇಲ್ಲ, ಮತ್ತು ಜೋಬಿ ಮತ್ತು ಅವನ ಹೆಂಡತಿ ನನ್ನ ಸಹೋದರಿಗೆ ವಂಚನೆ ಮಾಡಿದ್ದಾರೆ. ನನ್ನ ಸಾವಿಗೆ ನನ್ನ ಸಹೋದರ ಜೋಬಿ ಆಂಥೋನಿ ಮತ್ತು ಅವನ ಹೆಂಡತಿ ಶರ್ಮಿಳಾ ಕಾರಣ. ಅವರಿಗೆ ಶಿಕ್ಷೆಯಾಗಬೇಕು ಎಂದು ಜೋಶ್ ವೀಡಿಯೊದಲ್ಲಿ ಹೇಳಿದ್ದಾರೆ.

ಜೋಶ್ ಆತ್ಮಹತ್ಯೆಯ ಬಗ್ಗೆ ತಿಳಿದ ನಂತರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಕೂಡ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ , ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ಆನ್‌ಲೈನ್ ಬೆಟ್ಟಿಂಗ್ ಆಟಗಳನ್ನು ನಿಷೇಧಿಸುವ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿಯನ್ನು ಮಾಡಿತ್ತು. ಆನ್ ಲೈನ್ ಬೆಟ್ಟಿಂಗ್ ಕುಟುಂಬಗಳನ್ನು ಹಾಳು ಮಾಡುತ್ತಿದೆ. ಹೀಗಾಗಿ ಆಡಳಿತಾರೂಢ ಬಿಜೆಪಿ ಆನ್‌ಲೈನ್ ಬೆಟ್ಟಿಂಗ್ ಅನ್ನು ಅನುಮತಿಸುವುದಿಲ್ಲ ಎಂದು ಘೋಷಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT