ಹೆಚ್.ವಿಶ್ವನಾಥ್ 
ರಾಜ್ಯ

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್

ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ.

ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ ವ್ಯವಸ್ಥೆ ಈಗಲೂ ಮುಂದುವರಿದಿದೆ. ವಿದ್ಯಾರ್ಥಿಗಳ ಶುಲ್ಕದಲ್ಲಿ ವಿಶ್ವವಿದ್ಯಾಲಯ ನಡೆಯುವಂತಾಗಿದೆ. ರಾಜ್ಯದಲ್ಲೀಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದು ಹೇಳಿದರು.

ಉದಯಗಿರಿ ಕಲ್ಲು ತೂರಾಟ ಪ್ರಕರಣ ಕುರಿತು ಮಾತನಾಡಿ, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕು. ಈ ಸರ್ಕಾರವನ್ನು ರಾಜ್ಯದ ಜನರು ಆಯ್ಕೆ ಮಾಡಿದ್ದಾರೆ. ಎಲ್ಲದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು ಎಂದು ಹರಿಹಾಯ್ದರು.

ರಾಜ್ಯದಲ್ಲಿ ಶಾಂತಿಗೆ ಅವಕಾಶ ಇಲ್ಲದಂತಾಗಿದೆ. ಎಲ್ಲಾ ಕಡೆ, ಪ್ರಕ್ಷುಬ್ಧತೆ, ಗಲಾಟೆ ಗಲಭೆ, ಕೊಲೆ, ಆತ್ಮಹತ್ಯೆಗಳ ನಡೆಯುತ್ತಿವೆ, ಇದಕ್ಕೆಲ್ಲ ಯಾರು ಕಾರಣ? ಜನ ಕಾರಣ ಅಲ್ಲ. ನಾವು ಆಯ್ಕೆ ಮಾಡಿದ ಸರ್ಕಾರ ಕಾರಣ. ಸರ್ಕಾರದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು.

ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ, ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ. ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿಲ್ಲ. ನಮ್ಮ ಹೆಂಡ್ತಿಯರಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಎಂದು ಗಂಡಂದಿರು ಹೇಳ್ತಿದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕುರಿತು ಮಾತನಾಡಿ, ಉತ್ತರಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣಪುಟ್ಟ ಘಟನೆ ಹೊರತುಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚೆನ್ನಾಗಿದೆ. ಒಂದು ಮನೆ ನಡೆಸೋದೇ ಕಷ್ಟ. ಕೋಟ್ಯಾಂತರ ಜನರು ಭಾಗಿಯಾಗಿರುವ ಕುಂಭಮೇಳ ಯಶಸ್ವಿಯಾಗಿ ‌ನಡೆದಿದೆ. ಇದಕ್ಕಾಗಿ ಉತ್ತರಪ್ರದೇಶ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿದೆ. ಉತ್ತರಪ್ರದೇಶ ಸರ್ಕಾರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT