ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಗುಂಡು ತಗುಲಿ ನಾಲ್ಕು ವರ್ಷದ ಮಗು ಸಾವು; ಕೋಳಿ ಫಾರಂ ಮಾಲೀಕ ಮತ್ತು ಅಪ್ರಾಪ್ತನ ಬಂಧನ

ಕೋಳಿ ಸಾಕಣೆ ಕೇಂದ್ರದಲ್ಲಿ ಲೋಡೆಡ್ ಗನ್ ಇಟ್ಟುಕೊಂಡಿದ್ದ ನರಸಿಂಹ ಮೂರ್ತಿ ಅವರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.

ಮಂಡ್ಯ: ನಾಗಮಂಗಲ ತಾಲ್ಲೂಕಿನಲ್ಲಿ ನಾಲ್ಕು ವರ್ಷದ ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಳಿ ಸಾಕಾಣಿಕೆ ಕೇಂದ್ರದ ಮಾಲೀಕ ಮತ್ತು ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಅಪ್ರಾಪ್ತ ವಯಸ್ಕ ಮತ್ತು ದೊಂದೆಮಾದಹಳ್ಳಿ ಗ್ರಾಮದ ಕೋಳಿ ಸಾಕಾಣಿಕೆ ಕೇಂದ್ರದ ಮಾಲೀಕ ನರಸಿಂಹ ಮೂರ್ತಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಶಾಂಕ್ ಮತ್ತು ಲಿಪಿಕಾ ಪಶ್ಚಿಮ ಬಂಗಾಳದವರು ಆಗಿದ್ದಾರೆ. ನರಸಿಂಹ ಮೂರ್ತಿ ಅವರ ಕೋಳಿ ಸಾಕಾಣಿಕೆ ಕೇಂದ್ರದಲ್ಲಿ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು, ಅವರು ಭಾನುವಾರ ತಮ್ಮ ಅಪ್ರಾಪ್ತ ಮಗನೊಂದಿಗೆ ಅವರನ್ನು ಭೇಟಿ ಮಾಡಿದ್ದರು.

ಅಲ್ಲಿದ್ದ ಸಿಂಗಲ್-ಬ್ಯಾರೆಲ್ ಗನ್ ಲೋಡ್ ಆಗಿರುವುದು ತಿಳಿದಿಲ್ಲದ ಅಪ್ರಾಪ್ತ ವಯಸ್ಕ ಅದು ಆಟಿಕೆ ಗನ್ ಎಂದು ಭಾವಿಸಿ, ಟ್ರಿಗರ್ ಒತ್ತಿದ್ದ. ದುರದೃಷ್ಟವಶಾತ್, ಶಶಾಂಕ್ ಮತ್ತು ಲಿಪಿಕಾ ಅವರ ನಾಲ್ಕು ವರ್ಷದ ಮಗ ಅಭಿಜಿತ್ ಹತ್ತಿರದಲ್ಲಿ ಆಟವಾಡುತ್ತಿದ್ದಾಗ ಹೊಟ್ಟೆಗೆ ಗುಂಡು ತಗುಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದನು.

ಕೋಳಿ ಸಾಕಣೆ ಕೇಂದ್ರದಲ್ಲಿ ಲೋಡೆಡ್ ಗನ್ ಇಟ್ಟುಕೊಂಡಿದ್ದ ನರಸಿಂಹ ಮೂರ್ತಿ ಅವರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ, ಲಿಪಿಕಾ ನೀಡಿದ ದೂರಿನ ಆಧಾರದ ಮೇಲೆ ನಾಗಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂರ್ತಿ ಮತ್ತು ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು, ಅಧಿಕೃತ ಆದೇಶ!

ಅನ್‌ಫಾಲೋ ಪ್ರಹಸನ ಬೆನ್ನಲ್ಲೇ ದಿಢೀರ್ ಅಂತ ಅಮಿತ್ ಶಾರನ್ನು ಭೇಟಿಯಾದ ರಿಷಭ್ ಶೆಟ್ಟಿ!

ಛತ್ತೀಸಗಢ: IED ಸ್ಫೋಟದಲ್ಲಿ ನಾಲ್ವರು ಯೋಧರು ಹುತಾತ್ಮ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ!

ಟಿಎಂಸಿ ಕಾರ್ಯಕರ್ತರಿಂದ ನಮಗೆ ಜೀವ ಬೆದರಿಕೆ ಇದೆ; ಮತ ಎಣಿಕೆ ವೇಳೆ ನಮಗೆ ಭದ್ರತೆ ಕೊಡಿ; ಬಂಗಾಳದಲ್ಲಿ ನೂರಾರು ಗ್ರಾಮಸ್ಥರಿಂದ ಪ್ರತಿಭಟನೆ

ಜೂನ್ 12 ರಿಂದ ಇಂಗ್ಲೆಂಡ್ ನಲ್ಲಿ ಮಹಿಳಾ T20 ವಿಶ್ವಕಪ್ ಆರಂಭ: ಭಾರತ ತಂಡ ಪ್ರಕಟ!

SCROLL FOR NEXT