ಪುನೀತ್ ರಾಜ್ ಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

'ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ': ಎಲ್ಲಾ ತಾಲೂಕುಗಳಿಗೂ ವಿಸ್ತರಣೆಗೆ ಸರ್ಕಾರ ಮುಂದು

ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಹೃದಯಾಘಾತದ ಸಂದರ್ಭದಲ್ಲಿ 25,000 ರೂ. ಮೌಲ್ಯದ ಜೀವರಕ್ಷಕ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತಿದೆ.

ಬೆಳಗಾವಿ: ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕುಗಳಿಗೂ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಬೆಳಗಾವಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ, ಅದರಂತೆ ಡಯಾಲಿಸಿಸ್‌ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದ್ದು, ಇದಕ್ಕೆ ಶೀಘ್ರದಲ್ಲೇ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಟೇಕ್ ಕೇರ್ ಕೀಮೋಥೆರಪಿ ಆರಂಭಿಸಲಾಗುತ್ತಿದೆ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಹೃದಯಾಘಾತದ ಸಂದರ್ಭದಲ್ಲಿ 25,000 ರೂ. ಮೌಲ್ಯದ ಜೀವರಕ್ಷಕ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತಿದೆ. 1 ಮತ್ತು 2 ನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಯಾಗಿದ್ದು, 3 ಮತ್ತು 4 ನೇ ಹಂತದಲ್ಲಿ ಉಳಿದ 16 ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿ ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಕೆಲವು ಭಾಗಗಳಲ್ಲಿ ಹರಡುತ್ತಿದ್ದ ಕ್ಯಾಸನೂರು ಫಾರೆಸ್ಟ್ ಡಿಸೀಸ್‌ (ಕೆಎಫ್‌ಡಿ)ನ್ನು ಸಾಮಾನ್ಯವಾಗಿ ಮಂಗನ ಜ್ವರ ಎಂದು ಕರೆಯಲಾಗುತ್ತದೆ, ಇದನ್ನು ನಿಯಂತ್ರಿಸಲು ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಎಪಿಎಲ್ ಕಾರ್ಡ್ ಹೊಂದಿರುವವರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್‌ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವವರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT