ವೈದ್ಯೆ ಅನನ್ಯಾ ನದಿಗೆ ಹಾರಿದ ಕ್ಷಣ 
ರಾಜ್ಯ

ಕೊಪ್ಪಳ: ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್​ ಮೂಲದ ವೈದ್ಯೆ ಶವ ಪತ್ತೆ!

ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು.

ಕೊಪ್ಪಳ: ಮೋಜಿಗಾಗಿ ಫ್ರೆಂಡ್ಸ್ ಮುಂದೆಯೇ ತುಂಗಭದ್ರಾ ನದಿಗೆ ಹಾರಿದ್ದ ಹೈದರಾಬಾದ್ ಮೂಲದ ಮಹಿಳಾ ವೈದ್ಯೆ ಅನನ್ಯಾ ರಾವ್ ಶವ ಪತ್ತೆಯಾಗಿದೆ. ಈ ಘಟನೆ ಹಂಪಿಯಲ್ಲಿ ನಡೆದಿದೆ.

ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು. ಸ್ಮಾರಕಗಳಿಗೆ ಭೇಟಿ ನೀಡಿದ ನಂತರ, ಮಂಗಳವಾರ ರಾತ್ರಿ ಸಣಾಪುರ ಗ್ರಾಮದ ಅತಿಥಿ ಗೃಹದಲ್ಲಿ ತಂಗಿದ್ದರು. ಬುಧವಾರ ಮಧ್ಯಾಹ್ನ ಮೂವರು ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದಾರೆ.

ಇದೇ ಸಂದರ್ಭದಲ್ಲಿ ಅನನ್ಯಾ ರಾವ್ ಸುಮಾರು 25 ಅಡಿ ಎತ್ತರದ ಬಂಡೆಯಿಂದ ನೀರಿಗೆ ಹಾರಿ ಈಜಲು ಬಯಸಿದರು. ಬಂಡೆಯಿಂದ ನೀರಿಗೆ ಹಾರಿದ ಅನನ್ಯಾ ಸ್ವಲ್ಪ ಸಮಯದವರೆಗೆ ನೀರಿನಲ್ಲಿ ಈಜುತ್ತಿದ್ದರು.

ಆದರೆ, ಶೀಘ್ರದಲ್ಲೇ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಕೊಚ್ಚಿಕೊಂಡು ಹೋದರು. ಈ ವೇಳೆ ಆಕೆಯನ್ನು ಉಳಿಸಲು ಸ್ನೇಹಿತರು ಪ್ರಯತ್ನಿಸಿದರು. ಆದರೆ, ಅವರ ಪ್ರಯತ್ನಗಳು ವ್ಯರ್ಥವಾಯಿತು. ಗುರುವಾರ ಬೆಳಗ್ಗೆ ಅನನ್ಯಾ ರಾವ್ ಅವರ ಶವವನ್ನು ಹೊರತೆಗೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT