ಕೆಪಿಎಸ್ ಸಿ 
ರಾಜ್ಯ

KPSC: ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪ್ರಕ್ರಿಯೆಗೆ KSAT ತಡೆ

ಆಗಸ್ಟ್ 2024, ಡಿಸೆಂಬರ್ 29 ಎರಡು ಬಾರಿ ಪರೀಕ್ಷೆ ನಡೆಸಿದರೂ ಸಹ ಪ್ರಶ್ನೆಪತ್ರಿಕೆ ಭಾಷಾಂತರದಲ್ಲಿ ಯಡವಟ್ಟು ಕಾರಣ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳಿಗಾಗಿ KPSC ಎರಡು ಬಾರಿ ನಡೆಸಿದ ಪೂರ್ವ ಭಾವಿ ಪರೀಕ್ಷೆಯಲ್ಲಿ ಭಾರಿ ಯಡವಟ್ಟು, ಲೋಪದೋಷಗಳಿದ್ದರೂ ಅದನ್ನು ಸರಿಪಡಿಸದೆ ನೇಮಕಾತಿ ಪ್ರಕ್ರಿಯೆ ಮುಂದುವರೆಸದಂತೆ ಕರ್ನಾಟಕ ರಾಜ್ಯ ಆಡಳಿತ ಮಂಡಳಿ (KSAT)ಮಧ್ಯಂತರ ತಡೆ ನೀಡಿದೆ.

ಆಗಸ್ಟ್ 2024, ಡಿಸೆಂಬರ್ 29 ಎರಡು ಬಾರಿ ಪರೀಕ್ಷೆ ನಡೆಸಿದರೂ ಸಹ ಪ್ರಶ್ನೆಪತ್ರಿಕೆ ಭಾಷಾಂತರದಲ್ಲಿ ಯಡವಟ್ಟು ಕಾರಣ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಹಲವು ಕನ್ನಡ ಪರ ಸಂಘಟನೆಗಳು ಹಾಗೂ ಪ್ರತಿಪಕ್ಷ ಬಿಜೆಪಿ ಕೂಡಾ ಪ್ರತಿಭಟನೆ ವ್ಯಕ್ತಪಡಿಸುತ್ತಿವೆ.

ಆದರೆ, ಇದ್ಯಾವುದಕ್ಕೂ ಗಮನ ಕೊಡದ KPSC ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು. ಅಲ್ಲದೇ, ಜನವರಿ 29 ರಂದು ಮುಖ್ಯ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿತ್ತು.

ಈ ಸಂಬಂಧ ಡಿ. ಪವಿತ್ರಾ ಮತ್ತಿತರ 51 ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೆಎಸ್ ಎಟಿ ನ್ಯಾಯಾಂಗ ಸದಸ್ಯ ಎಸ್. ವೈ. ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರಿದ್ದ ಪೀಠ, ಈ ಕುರಿತು ಆದೇಶಿಸಿದ್ದು, ಮುಂದಿನ ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದೆ.

ಈ ಹಿಂದಿನ ದೋಷಗಳನ್ನು ಸರಿಪಡಿಸದೆ ಮುಖ್ಯ ಪರೀಕ್ಷೆ ನಡೆಸಲು KPSC ಹೇಗೆ ಅಧಿಸೂಚನೆ ಹೊರಡಿಸಿದೆ ಎಂದು ಪ್ರಶ್ನಿಸಿರುವ ಪೀಠ, ಆಯೋಗ ಜನವರಿ 29 ರಂದು ಹೊರಡಿಸಿದ್ದ ಮುಖ್ಯ ಪರೀಕ್ಷೆ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಅಮಾನತ್ತಿನಲ್ಲಿ ಇರಿಸುವಂತೆ ಆದೇಶಿಸಿದೆ. ಪ್ರಶ್ನೆಪತ್ರಿಕೆ ಭಾಷಾಂತರದಲ್ಲಿ ದೋಷಗಳಾಗಿದ್ದು, ಈ ವಿಚಾರವನ್ನು ಬಗೆಹರಿಸುವಂತೆ ತಜ್ಞರ ಸಮಿತಿ ನೀಡಿರುವ ವರದಿಯಲ್ಲಿ ಸಲಹೆ ನೀಡಲಾಗಿದೆ ಎಂಬ ಅಂಶವನ್ನು ಪೀಠ ಉಲ್ಲೇಖಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT