ಸಾಂದರ್ಭಿಕ ಚಿತ್ರ 
ರಾಜ್ಯ

SSLC ವಿದ್ಯಾರ್ಥಿಗಳಿಗೆ ಈ ವರ್ಷದಿಂದ 'ಹೆಚ್ಚುವರಿ' ಗ್ರೇಸ್ ಮಾರ್ಕ್ಸ್ ಇಲ್ಲ; ಉತ್ತೀರ್ಣರಾಗಲು ಕನಿಷ್ಠ ಶೇ.35 ಅಂಕ ಅಗತ್ಯ!

ಕೆಲವೇ ಅಂಕಗಳಿಂದ ಉತ್ತೀರ್ಣ ಅವಕಾಶ ತಪ್ಪುವ ಮಕ್ಕಳನ್ನು ಮೇಲೆತ್ತಲು ಈ ಹಿಂದೆ ಇದ್ದಂತೆ ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಗ್ರೇಸ್ ಅಂಕ ನೀಡುವ ಪದ್ಧತಿ ಮುಂದುವರೆಯಲಿದೆ.

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ತೆಗೆಯಲಾಗಿದ್ದು, 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ 35ಕ್ಕೆ ನಿಗದಿ ಮಾಡಲಾಗಿದೆ.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಸಿದ್ಧತೆ ಕುರಿತು ಶಿಕ್ಷಣ, ಗೃಹ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು, ಉಪ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತುಕತೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಅಲ್ಲದೆ, ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೇಸ್ ಅಂಕಗಳನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ವೆಬ್ ಕಾಸ್ಟಿಂಗ್ ಕಣ್ಗಾವಲು ವ್ಯವಸ್ಥೆ ಜಾರಿಯಿಂದ ಕಳೆದ ಬಾರಿ ತೀವ್ರವಾಗಿ ಕುಸಿದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಜಾರಿಗೆ ತಂದಿದ್ದ ಶೇ.10ರಷ್ಟು ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ಬಾರಿ ಇರುವುದಿಲ್ಲ. ಆದರೆ, ಕೆಲವೇ ಅಂಕಗಳಿಂದ ಉತ್ತೀರ್ಣ ಅವಕಾಶ ತಪ್ಪುವ ಮಕ್ಕಳನ್ನು ಮೇಲೆತ್ತಲು ಈ ಹಿಂದೆ ಇದ್ದಂತೆ ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಗ್ರೇಸ್ ಅಂಕ ನೀಡುವ ಪದ್ಧತಿ ಮುಂದುವರೆಯಲಿದೆ. ಇದರಿಂದ ಕಳೆದ ಬಾರಿ ಒಟ್ಟಾರೆ ಶೇ.20ರಷ್ಟು ಗ್ರೇಸ್ ಅಂಕ ನೀಡಲು ಇದ್ಧ ಅವಕಾಶ ಈಗ ಶೇ.10ಕ್ಕೆ ಸೀಮಿತವಾಗಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಪ್ರಥಮ ಭಾಷೆಯಲ್ಲಿ 35 ಅಂಕಗಳನ್ನು ಗಳಿಸಬೇಕು. ಇತರ ವಿಷಯಗಳಲ್ಲಿ, ವಿದ್ಯಾರ್ಥಿಯು ಲಿಖಿತ ಪರೀಕ್ಷೆಯಲ್ಲಿ 28 ಅಂಕಗಳನ್ನು ಪಡೆಯಬೇಕು. ಆಂತರಿಕ ಅಂಕಗಳ ಜೊತೆಗೆ, ವಿದ್ಯಾರ್ಥಿಯು ಪರೀಕ್ಷೆಯಲ್ಲಿ ಉತ್ತೀರ್ಣನಾಗಲು 35 ಅಂಕಗಳನ್ನು ಗಳಿಸಬೇಕು. ವಿದ್ಯಾರ್ಥಿಯು ಮೂರು ವಿಷಯಗಳಲ್ಲಿ ಅನುತ್ತೀರ್ಣನಾದರೆ, 10 ಗ್ರೇಸ್ ಅಂಕಗಳನ್ನು ನೀಡುವ ಮೂಲಕ, ಅವನು/ಅವಳು ಉತ್ತೀರ್ಣನಾಗಲು ಕನಿಷ್ಠ ಅಂಕಗಳನ್ನು (219) ದಾಟಿದರೆ, ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ.

ಅದೇ ರೀತಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿ ಎರಡು ವಿಷಯಗಳಲ್ಲಿ ಅನುತ್ತೀರ್ಣನಾದರೆ ಶೇ.5ರಷ್ಟು ಗ್ರೇಸ್ ಅಂಕಗಳನ್ನು ನೀಡುವ ಮೂಲಕ, ಅವನು/ಅವಳು ಕನಿಷ್ಠ ಉತ್ತೀರ್ಣ ಅಂಕಗಳನ್ನು (210) ದಾಟಿದರೆ, ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ. ಈ ಪದ್ಧತಿ ಮುಂದುವರಿಯುತ್ತದೆ ಎಂದು ಹೇಳಿದರು.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ದ್ವಿತೀಯ ಪಿಯುಸಿ ಮಾರ್ಚ್ 1 ರಿಂದ 20 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ. ಪಿಯುಸಿಗೆ 7,13,862 ವಿದ್ಯಾರ್ಥಿಗಳು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 5,050 ಕಾಲೇಜುಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 15,881 ಶಾಲೆಗಳು ನೋಂದಾಯಿಸಿಕೊಂಡಿವೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 1171 ಪರೀಕ್ಷಾ ಕೇಂದ್ರಗಳು, 2,342 ಸ್ಥಾನಿಕ ಜಾಗೃತ ದಳಗಳು, 504 ವಿಚಕ್ಷಣ ಜಾಗೃತ ದಳಗಳು, 365 ಪ್ರಶ್ನೆಪತ್ರಿಕಾ ವಿತರಣಾ ಮಾರ್ಗಗಳು, 1,171 ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ/ಜಂಟಿ ಅಧೀಕ್ಷಕರು, ಉತ್ತರ ಪತ್ರಿಕೆಗಳ/ಪ್ರಶ್ನೆ ಪತ್ರಿಕೆಗಳ ಪಾಲಕರನ್ನು ನೇಮಿಸಲಾಗುತ್ತದೆ.

ಉತ್ತರ ಪತ್ರಿಕೆಗಳ ಮೌಲ್ಯಮಾಪನ 76 ಕೇಂದ್ರಗಳಲ್ಲಿ ನಡೆಯಲಿದ್ದು, 31000 ಮೌಲ್ಯ ಮಾಪಕರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ 2,818 ಪರೀಕ್ಷಾ ಕೇಂದ್ರಗಳು ಹಾಗೂ ಸ್ಥಾನಿಕ ಜಾಗೃತ ಸ್ಥಳಗಳು ಇರಲಿವೆ. ಜಿಲ್ಲಾ ಹಂತದಲ್ಲಿ 410, ತಾಲ್ಲೂಕು ಹಂತದಲ್ಲಿ 1,662, ವಿಚಕ್ಷಣ ಜಾಗೃತ ದಳಗಳು ಇರಲಿವೆ.

1,117 ಪ್ರಶ್ನೆ ಪತ್ರಿಕಾ ವಿತರಣಾ ಮಾರ್ಗಗಳ ಸಂಖ್ಯೆ ಇದ್ದು, 2,818 ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿರುತ್ತಾರೆ. ಉಪ/ಜಂಟಿ ಅಧೀಕ್ಷಕರ ಸಂಖ್ಯೆ 958 ಆಗಿದ್ದು 2818 ಉತ್ತರ ಪತ್ರಿಕೆಗಳ/ಪ್ರಶ್ನೆ ಪತ್ರಿಕೆಗಳ ಪಾಲಕರಿರುತ್ತಾರೆ. 240 ಕೇಂದ್ರದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು 65 ಸಾವಿರ ಮೌಲ್ಯ ಮಾಪಕರು ಮಾಡಲಿದ್ದಾರೆ ಎಂದು ಸಚಿವರು ವಿವರಿಸಿದರು.

ಪರೀಕ್ಷೆ ನಡೆಯುವ ಸಂದರ್ಭದಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ವಿದ್ಯಾರ್ಥಿಗಳು ಯಾವುದೇ ಭಯ, ಆತಂಕವಿಲ್ಲದೆ ಧೈರ್ಯದಿಂದ ಸಂತೋಷದಿಂದ ಪರೀಕ್ಷೆ ಬರೆಯಬಹುದು. ಕಲಿಕೆಯಲ್ಲಿ ಹಿಂದುಳಿದಿದ್ದ ವಿದ್ಯಾರ್ಥಿಗಳನ್ನು ವಿಶೇಷ ತರಗತಿಗಳ ಮೂಲಕ ಸಜ್ಜುಗೊಳಿಸಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ಈ ಬಾರಿ ವಿಶೇಷ ಕಾಳಜಿ ವಹಿಸಿದ್ದಾರೆ. ಕಡಿಮೆ ಫಲಿತಾಂಶ ಬಂದಿದ್ದ ಜಿಲ್ಲಾ ಮತ್ತು ತಾಲ್ಲೂಕುಗಳಲ್ಲೂ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಲಾಗಿದೆ ಎಂದರು.

ಹಿಜಾಬ್ ವಿಷಯ ನ್ಯಾಯಾಲಯದಲ್ಲಿರುವುದರಿಂದ ಯಾವುದೇ ನಿರ್ಧಾರ ಮಾಡಿಲ್ಲ. ಅನುದಾನಿತ ಶಿಕ್ಷಕರ ನೇಮಕಕ್ಕೆ, ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ. 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಚಾಲನೆಯಲ್ಲಿದೆ. ಬಜೆಟ್‌ನಲ್ಲಿ 5 ಸಾವಿರ ಕೊಠಡಿಗೆ ಮತ್ತು ಶೌಚಾಲಯಗಳನ್ನು ನಿರ್ಮಿಸಲು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT