ಶಾಲಿನಿ ರಜನೀಶ್  
ರಾಜ್ಯ

ಸರ್ಕಾರದ ಜೊತೆ ನಾಗರೀಕರು ಕೈಜೋಡಿಸಿದರೆ ರಸ್ತೆಗಳ ಸುಸ್ಥಿತಿಯಲ್ಲಿಡಲು ಸಾಧ್ಯ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

ಜನರು ಬೆಂಗಳೂರಿನ ಹವಾಮಾನವನ್ನು ಬಗ್ಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ, ಅಷ್ಟೇ ನಗರದ ರಸ್ತೆಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾರೆ. ನಗರದ ರಸ್ತೆಗಳ ಕುರಿತು ಸವಿವರವಾದ ಚಿತ್ರವನ್ನು ಇಲ್ಲಿ ಪ್ರಸ್ತಾಪಿಸಿದ್ದು, ಅದರಿಂದ ಸಮಸ್ಯೆಯ ಗಾತ್ರ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ನಿಖರವಾಗಿ ನೋಡಲು ಸಾಧ್ಯವಾಗುತ್ತಿದೆ.

ಬೆಂಗಳೂರು: ಬೆಂಗಳೂರಿನ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಮುಖ್ಯವಾಗಿ ನಗರದ ನಾಗರಿಕರಿಂದ ಸಾಮೂಹಿಕ ಪ್ರಯತ್ನಗಳು ಅಗತ್ಯವಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಶುಕ್ರವಾರ ಅಭಿಪ್ರಾಯಪಟ್ಟರು.

‘ನಮ್ಮ ರಸ್ತೆ–2025’ಯಲ್ಲಿ ‘ಪಾಲಿಕೆಯ ಎಂಜಿನಿಯರ್‌ಗಳ ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಈ ವೇಳೆ ಸರ್ಕಾರದ ಉಪಕ್ರಮವನ್ನು ಶ್ಲಾಘಿಸಿದ ಅವರು, ನಾಗರಿಕರು ಸರ್ಕಾರದೊಂದಿಗೆ ಕೈಜೋಡಿಸಿದರೆ, ನಗರದ ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜನರು ಬೆಂಗಳೂರಿನ ಹವಾಮಾನವನ್ನು ಬಗ್ಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ, ಅಷ್ಟೇ ನಗರದ ರಸ್ತೆಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾರೆ. ನಗರದ ರಸ್ತೆಗಳ ಕುರಿತು ಸವಿವರವಾದ ಚಿತ್ರವನ್ನು ಇಲ್ಲಿ ಪ್ರಸ್ತಾಪಿಸಿದ್ದು, ಅದರಿಂದ ಸಮಸ್ಯೆಯ ಗಾತ್ರ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ನಿಖರವಾಗಿ ನೋಡಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ದಿನೇ ದಿನೇ ಬೆಳೆಯುತ್ತಿದ್ದು, ನಗರಕ್ಕೆ ಬಂದು ವಾಸಿಸುವುದಕ್ಕೆ ಜನರು ಇಷ್ಟ ಪಡುತ್ತಾರೆ. ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಿದರೆ ಅದಕ್ಕಿಂತ ಹೆಚ್ಚಾಗಿ ಸಂಚಾರ ದಟ್ಟಣೆ ನಿಯಂತ್ರಮ ಮೀರಿ ಹೆಚ್ಚುತ್ತಲೇ ಇದೆ. ಅದನ್ನು ಹೇಗೆ ನಿಯಂತ್ರಣ ಮಾಡಬೇಕೆಂಬುದರ ಬಗ್ಗೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ನಾಗರೀಕರು ಏನು ಮಾಡಬಹುದು. ನಮ್ಮ ಬೆಂಗಳೂರು-ನಮ್ಮ ರಸ್ತೆ, ನಮ್ಮದೇ ಸಮಸ್ಯೆ-ನಮ್ಮದೇ ಪರಿಹಾರ ಆ ನಿಟ್ಟಿನಲ್ಲಿ ಯೋಜಿಸಿ ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ವ್ಯವಸ್ಥೆ ಮಾಡಬೇಕಿದೆ ಎಂದರು.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸಿದರೂ ಒಂದೇ ಮಾದರಿಯ ವಿನ್ಯಾಸವಿರುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಬಿಡುಗಡೆಗೊಳಿಸಿರುವ ನಮ್ಮ ರಸ್ತೆ ಕೈಪಿಡಿಯಲ್ಲಿರುವ ಪ್ರಮಾಣಿತ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಬೇಕೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT