ಬಿಜೆಪಿ ಸಭೆ 
ರಾಜ್ಯ

ಮಾ.3 ರಿಂದ ಬಜೆಟ್ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು BJP ಸಜ್ಜು

ಅಧಿವೇಶನ ವೇಳೆ ಸರ್ಕಾರದ ವಿರುದ್ಧ ಹಲವು ಅಸ್ತ್ರಗಳ ಪ್ರಯೋಗಿಸಲು ಬಿಜೆಪಿ ಸಜ್ಜಾಗಿದ್ದು, ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು.

ಬೆಂಗಳೂರು: ಮಾರ್ಚ್ 3 ರಿಂದ ರಾಜ್ಯ ಬಜೆಟ್ ಅಧಿವೇಶನದ ಆರಂಭವಾಗುತ್ತಿದ್ದು, ಈ ವೇಳೆ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ.

ಅಧಿವೇಶನ ವೇಳೆ ಸರ್ಕಾರದ ವಿರುದ್ಧ ಹಲವು ಅಸ್ತ್ರಗಳ ಪ್ರಯೋಗಿಸಲು ಬಿಜೆಪಿ ಸಜ್ಜಾಗಿದ್ದು, ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದ್ದು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಬಹಿರಂಗಪಡಿಸಲು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸದನದಲ್ಲಿ ಬಲವಾದ ಪ್ರತಿಪಕ್ಷದ ಹೋರಾಟ ನಡೆಸಲಾಗುವುದು. ಈ ಕುರಿತು ಸರ್ವ ಸದಸ್ಯರು ತೀವ್ರ ಚರ್ಚೆ ನಡೆಸಿ, ಸರ್ಕಾರದ ಅಸಮರ್ಥತೆ ವಿರುದ್ಧ ರಾಜ್ಯದ ಜನತೆಗಾಗಿ ಪ್ರಭಾವೀ ನಿಲುವು ಕೈಗೊಳ್ಳಲು ನಿರ್ಧರಿಸಲಾಗಿದೆ. ಜೆಡಿಎಸ್ ಸದಸ್ಯರೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT