ಭೀಮವ್ವ ಅವರನ್ನು ಸನ್ಮಾನಿಸಿದ ರಾಜ್ಯಪಾಲ ಸಿ.ಹೆಚ್. ವಿಜಯಶಂಕರ್ 
ರಾಜ್ಯ

ಕೊಪ್ಪಳ: ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ನಿವಾಸಕ್ಕೆ ಮೇಘಾಲಯ ರಾಜ್ಯಪಾಲರ ಭೇಟಿ

ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.

ಕೊಪ್ಪಳ: ತೊಗಲುಗೊಂಬೆಯಾಟದಲ್ಲಿ ಅದ್ವೀತಿಯ ಸಾಧನೆಗಾಗಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರ ನೀವಾಸಕ್ಕೆ ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಶನಿವಾರ ಭೇಟಿ ನೀಡಿದರು.

ಬಳಿಕ ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.

ಭೀಮವ್ವ ಹಾಗೂ ಅವರ ಕುಟುಂಬದವರು ಹಾಡಿದ ಹಾಡುಗಳನ್ನು ಆಲಿಸಿದ ರಾಜ್ಯಪಾಲರು, ಮೇಘಾಲಯದ ರಾಜಭವನದಲ್ಲಿ ಈ ಕಲೆ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಇದೇ ಕಲಾವಿದರನ್ನು ಕರೆಯಿಸಬೇಕು ಎಂದು ತಮ್ಮ ವಿಶೇಷ ಕರ್ತವ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ, ಕೊಪ್ಪಳ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ, ಬಸವರಾಜ ದಡೆಸುಗೂರು ಅಳವಂಡಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT