ಭೀಮವ್ವ ಅವರನ್ನು ಸನ್ಮಾನಿಸಿದ ರಾಜ್ಯಪಾಲ ಸಿ.ಹೆಚ್. ವಿಜಯಶಂಕರ್ 
ರಾಜ್ಯ

ಕೊಪ್ಪಳ: ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ನಿವಾಸಕ್ಕೆ ಮೇಘಾಲಯ ರಾಜ್ಯಪಾಲರ ಭೇಟಿ

ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.

ಕೊಪ್ಪಳ: ತೊಗಲುಗೊಂಬೆಯಾಟದಲ್ಲಿ ಅದ್ವೀತಿಯ ಸಾಧನೆಗಾಗಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರ ನೀವಾಸಕ್ಕೆ ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಶನಿವಾರ ಭೇಟಿ ನೀಡಿದರು.

ಬಳಿಕ ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.

ಭೀಮವ್ವ ಹಾಗೂ ಅವರ ಕುಟುಂಬದವರು ಹಾಡಿದ ಹಾಡುಗಳನ್ನು ಆಲಿಸಿದ ರಾಜ್ಯಪಾಲರು, ಮೇಘಾಲಯದ ರಾಜಭವನದಲ್ಲಿ ಈ ಕಲೆ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಇದೇ ಕಲಾವಿದರನ್ನು ಕರೆಯಿಸಬೇಕು ಎಂದು ತಮ್ಮ ವಿಶೇಷ ಕರ್ತವ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ, ಕೊಪ್ಪಳ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ, ಬಸವರಾಜ ದಡೆಸುಗೂರು ಅಳವಂಡಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT