ಕೊಲೆ ಆರೋಪಿ ಪ್ರೀತಮ್ ಡಿಸೋಜ 
ರಾಜ್ಯ

ಉತ್ತರ ಕನ್ನಡ: 10 ವರ್ಷದ ಪ್ರೀತಿಗೆ ಮತ್ತೆ ಮರುಜೀವ; ಪ್ರಿಯತಮೆಯ ಗಂಡನಿಗೆ ಚೂರಿ ಇರಿದುಕೊಂದ ಪಾಗಲ್ ಪ್ರೇಮಿ!

10 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರಿಯತಮೆ ಕೊನೆಗೆ ಬೇರೊಂದು ಮದುವೆಯಾಗಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಗಂಡನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಶಿರಸಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯೊಬ್ಬ ಗಂಗಾಧರ ಎಂದು ಗುರುತಿಸಲಾಗಿದೆ.

ಶಿರಸಿ: 10 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರಿಯತಮೆ ಕೊನೆಗೆ ಬೇರೊಂದು ಮದುವೆಯಾಗಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಗಂಡನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಶಿರಸಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯೊಬ್ಬ ಗಂಗಾಧರ ಎಂದು ಗುರುತಿಸಲಾಗಿದೆ.

ಭಗ್ನ ಪ್ರೇಮಿ ಪ್ರೀತಮ್ ಡಿಸೋಜ ಶಿರಸಿ ಮೂಲದ ಪೂಜಾ ಎಂಬಾಕೆಯನ್ನು ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದನು. ಅಲ್ಲದೆ ಇಬ್ಬರು ರಿಜಿಸ್ಟರ್ ಮ್ಯಾರೇಜ್ ಮಾಡಿಕೊಳ್ಳಲು ಯೋಜಿಸಿದ್ದರು. ಅಷ್ಟರಲ್ಲಾಗಲೇ ಪ್ರೀತಮ್ ಗೆ ಮತ್ತೊಂದು ಅಫೆರ್ ಇರುವುದು ಗೊತ್ತಾಗಿ ಪೂಜಾ ಆತನನ್ನು ಬಿಟ್ಟು ಬಿಟ್ಟಿದ್ದಳು. ನಂತರ ಗಂಗಾಧರ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಈ ವಿಷಯ ತಿಳಿದ ಪ್ರೀತಮ್ ಪೂಜಾಗೆ ಕರೆ ಮಾಡಿ ಕ್ಷಮೆಯಾಚಿಸಿದ್ದಾನೆ. ನಂತರ ಇಬ್ಬರ ಮಧ್ಯೆ ಮತ್ತೆ ಪ್ರೀತಿ ಶುರುವಾಗಿದೆ.

ಈ ಮಧ್ಯೆ ತಮ್ಮಿಬ್ಬರ ಪ್ರೀತಿಗೆ ಗಂಗಾಧರ್ ಮುಳ್ಳಾಗಿದ್ದಾನೆ ಎಂದು ಇಬ್ಬರು ಬಾವಿಸಿದ್ದಾರೆ. ಹೀಗಾಗಿ ಪ್ರೀತಮ್ ನಿನ್ನೆ ಶಿರಸಿಗೆ ಬಂದಿದ್ದ ಗಂಗಾಧರ್ ಜೊತೆ ಜಗಳ ತೆಗೆದು ಆತನಿಗೆ ಚೂರಿ ಇರಿದು ಕೊಂದಿದ್ದಾನೆ. ಕೊಲೆ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ವೇಳೆ ಗಂಗಾಧರ್ ಪತ್ನಿ ಪೂಜಾಳನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಆಗ ಪೂಜಾ ಪ್ರೀತಮ್ ಹೆಸರನ್ನು ಬಾಯಿಬಿಟ್ಟಿದ್ದಾಳೆ. ಕೂಡಲೇ ಅಲರ್ಟ್ ಆದ ಉತ್ತರ ಕನ್ನಡ ಎಸ್ ಪಿ ಎಂ ನಾರಾಯಣ್ ಅವರು ತಂಡಗಳನ್ನು ರಚಿಸಿದ್ದು ಯಲ್ಲಾಪುರದಿಂದ ಇನ್ನೇನು ಜಿಲ್ಲೆಯ ಗಡಿ ದಾಟಲು ಯತ್ನಿಸುತ್ತಿದ್ದ ಪ್ರೀತಮ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT