ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬೇಕಾಬಿಟ್ಟಿಯಾಗಿ ಕುಡಿಯುವ ನೀರು ಬಳಕೆ; 112 ಪ್ರಕರಣ ದಾಖಲು, 5.60 ಲಕ್ಷ ರೂ ದಂಡ ವಸೂಲಿ

ಕುಡಿಯುವ ನೀರಿನ ದುರ್ಬಳಕೆಗೆ ಕಡಿವಾಣ ಹಾಕಲು ಹಾಗೂ ಎಲ್ಲ ನಿವಾಸಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ಜಲಮಂಡಳಿ ಫೆ.17ರಂದು ಸುತ್ತೋಲೆ ಹೊರಡಿಸಿತ್ತು.

ಬೆಂಗಳೂರು: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನೀರಿನ ಸಮಸ್ಯೆ ಎದುರಾಗುತ್ತಿದ್ದು, ಕುಡಿಯುವ ನೀರನ್ನು ಬೇಕಾಬಿಟ್ಟಿಯಾಗಿ ಬಳಸುವುದ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಕ್ರಮ ಕೈಗೊಂಡಿದ್ದು, ಕಳೆದ ವಾರದಲ್ಲಿ 112 ಪ್ರಕರಣಗಳನ್ನು ದಾಖಲಿಸಿ, 5.60 ಲಕ್ಷ ರೂ. ದಂಡ ವಸೂಲಿ ಮಾಡುತ್ತಿದೆ.

ಕುಡಿಯುವ ನೀರಿನ ದುರ್ಬಳಕೆಗೆ ಕಡಿವಾಣ ಹಾಕಲು ಹಾಗೂ ಎಲ್ಲ ನಿವಾಸಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ಜಲಮಂಡಳಿ ಫೆ.17ರಂದು ಸುತ್ತೋಲೆ ಹೊರಡಿಸಿತ್ತು. ಅದರಂತೆ ಕುಡಿಯುವ ನೀರಿನ ಅನಾವಶ್ಯಕ ಪೋಲಿನ ವಿರುದ್ಧ ಅಭಿಯಾನವನ್ನು ತೀವ್ರಗೊಳಿಸಿದೆ.

BWSSB ಅಧಿಕಾರಿಗಳು 112 ಪ್ರಕರಣಗಳನ್ನು ಗುರುತಿಸಿ, ದಂಡ ವಿಧಿಸಿದ್ದಾರೆ. ಈ ಪೈಕಿ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು 33 ಪ್ರಕರಣಗಳು ದಾಖಲಾಗಿದ್ದು, ಪಶ್ಚಿಮ ವಲಯ ಮತ್ತು ಪೂರ್ವ ವಲಯದಲ್ಲಿ ತಲಾ 28 ಪ್ರಕರಣಗಳು ಮತ್ತು ಉತ್ತರ ವಲಯದಲ್ಲಿ 23 ಪ್ರಕರಣಗಳು ದಾಖಲಾಗಿವೆ. ಅಪರಾಧಿಗಳಿಂದ ದಂಡ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ 1964 ರ ಸೆಕ್ಷನ್ 33 ಮತ್ತು 34 ರಡಿ ಚಲನಚಿತ್ರ ಮಂದಿರಗಳು ಮತ್ತು ಮಾಲ್‌ಗಳಲ್ಲಿ ವಾಹನ ಸ್ವಚ್ಛತೆ, ತೋಟಗಾರಿಕೆ, ನಿರ್ಮಾಣ, ಮನರಂಜನೆ, ಅಲಂಕಾರಿಕ ಕಾರಂಜಿಗಳು ಮತ್ತು ಇತರ ಕುಡಿಯದ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳ ಹೊರತಾಗಿಯೂ, ಅನೇಕ ವ್ಯಕ್ತಿಗಳು ಮತ್ತು ಘಟಕಗಳು ನೀರಿನ ಬಿಕ್ಕಟ್ಟನ್ನು ನಿರ್ಲಕ್ಷಿಸಿ ಶುದ್ಧ ನೀರನ್ನು ದುರ್ಬಳಕೆ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ನೀರು ಅತ್ಯಮೂಲ್ಯ ಸಂಪನ್ಮೂಲವಾಗಿದ್ದು, ಸುಮಾರು 100 ಕಿಲೋಮೀಟರ್ ದೂರದಿಂದ ಬೆಂಗಳೂರಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಸಾರ್ವಜನಿಕರು ನೀರು ವ್ಯರ್ಥವಾಗುವುದನ್ನು ತಪ್ಪಿಸಬೇಕು ಮತ್ತು ಅಗತ್ಯವಿರುವ ಎಲ್ಲಾ ಪ್ರದೇಶಗಳಿಗೆ ಮತ್ತು ನಿವಾಸಿಗಳಿಗೆ ಸಮಾನವಾಗಿ ನೀರು ಪೂರೈಕೆ ಖಾತ್ರಿಗೆ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು BWSSB ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT